Monday, February 24, 2025
Monday, February 24, 2025

‘ಇಂಕ್ ಡಬ್ಬಿ’ ಆನ್ಲೈನ್ ಮಾಧ್ಯಮದಿಂದ ರಾಜ್ಯಮಟ್ಟದ ಲೇಖನ ಸ್ಪರ್ಧೆ

‘ಇಂಕ್ ಡಬ್ಬಿ’ ಆನ್ಲೈನ್ ಮಾಧ್ಯಮದಿಂದ ರಾಜ್ಯಮಟ್ಟದ ಲೇಖನ ಸ್ಪರ್ಧೆ

Date:

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ “ಇಂಕ್ ಡಬ್ಬಿ” ಆನ್ಲೈನ್ ಮಾಧ್ಯಮದ ವತಿಯಿಂದ ರಾಜ್ಯಮಟ್ಟದ ಲೇಖನ ಸ್ಪರ್ಧೆಯ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಬರವಣಿಗೆಯ ಕೌಶಲ್ಯವನ್ನು ಉತ್ತೇಜಿಸುವ ಮತ್ತು ವಿದ್ಯಾರ್ಥಿ-ಯುವಜನರಲ್ಲಿ ಚಿಂತಿಸುವ ಮತ್ತು ಆಲೋಚಿಸುವ ಮನೋಭಾವವನ್ನು ಬೆಳೆಸುವುದಕ್ಕಾಗಿ ಹಾಗೂ ಸಂವೇದನಾಶೀಲ ವಿದ್ಯಾರ್ಥಿ-ಯುವಜನರನ್ನು ಒಳಗೊಂಡ ಸಮಾಜದ ನಿರ್ಮಾಣಕ್ಕಾಗಿ ಬರವಣಿಗೆಯ ಕೌಶಲ್ಯವನ್ನು ಉತ್ತೇಜಿಸುತ್ತಿದ್ದೇವೆ. ಇಂಕ್ ಡಬ್ಬಿ ಆನ್ಲೈನ್ ಮಾಧ್ಯಮವು ರಾಜ್ಯದ ವಿದ್ಯಾರ್ಥಿ-ಯುವಜನರ ಆಲೋಚನೆ, ವಿಚಾರ ಮತ್ತು ಅಭಿಪ್ರಾಯಗಳನ್ನು ಮುಖ್ಯವಾಹಿನಿಗೆ ತಲುಪಿಸುವ ವೇದಿಕೆಯಾಗಿ ಹೊರಹೊಮ್ಮುತ್ತಿದೆ.

ಸಮಾಜದ ಆಗು-ಹೋಗುಗಳ ಬಗ್ಗೆ ಅರಿವಿರುವ ಸಂವೇದನಾಶೀಲ ವಿದ್ಯಾರ್ಥಿ-ಯುವಜನರನ್ನು ಒಳಗೊಂಡ ಸಮಾಜದ ನಿರ್ಮಾಣಕ್ಕಾಗಿ ಬರವಣಿಗೆಯ ಕೌಶಲ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಂಕ್ ಡಬ್ಬಿ ಕಾರ್ಯನಿರ್ವಹಿಸುತ್ತಿದ್ದು ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತವಾಗಿ ರಾಜ್ಯದ ವಿದ್ಯಾರ್ಥಿ-ಯುವಜನರಿಗೆ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಶೀರ್ಷಿಕೆಯ ವಿಷಯದ ಕುರಿತು ಕ್ಯಾಂಪಸ್ ಗಳಲ್ಲಿ ಚರ್ಚೆಗೆ ಒಳಗಾಗಲಿ ಎಂಬ ಆಶಯವಿದೆ.

ವಿಷಯ: ಭಾರತದ ಸಂವಿಧಾನ, ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಸ್ತುತ ವಿದ್ಯಾರ್ಥಿ-ಯುವಜನರ ಕರ್ತವ್ಯ.

ಬಹುಮಾನಗಳ ವಿವರ: ಪ್ರಥಮ ಬಹುಮಾನ: 10,000 ರೂಪಾಯಿ ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ: 5,000 ರೂಪಾಯಿ ಮತ್ತು ಪ್ರಮಾಣ ಪತ್ರ. ತೃತೀಯ ಬಹುಮಾನ: 3,000 ರೂಪಾಯಿ ಮತ್ತು ಪ್ರಮಾಣ ಪತ್ರ. ಆಯ್ದ ಲೇಖನಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು.

ಲೇಖನ ಸ್ವೀಕರಿಸುವ ಕೊನೆಯ ದಿನಾಂಕ: ನವೆಂಬರ್ 25, 2021

ಯಾರು ಬರೆಯಬಹುದು:
ಪದವಿ, ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಮಾತ್ರ. ಲೇಖನವನ್ನು ಈ-ಮೇಲ್ ಮೂಲಕ ಕಳುಹಿಸುವವರು ಈ ವಿಳಾಸಕ್ಕೆ ಕಳುಹಿಸಿ: [email protected]

ಲೇಖನವನ್ನು ಅಂಚೆ ಮೂಲಕ ಕಳುಹಿಸುವವರು ಈ ವಿಳಾಸಕ್ಕೆ ಕಳುಹಿಸಿ: ಜ್ಞಾನ ಕೇಂದ್ರ #7 ಎಸ್.ಆರ್‌.ಕೆ ಉದ್ಯಾನ, ಜಯನಗರ ಪೂರ್ವ, ಬೆಂಗಳೂರು – 560041

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8183871243 /8792908185

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!