Home ಸುದ್ಧಿಗಳು ರಾಜ್ಯ ಮೈಸೂರು: 71 ಸಾವಿರ ಯುವಜನತೆಗೆ ‘ನೇಮಕಾತಿ ಪತ್ರ’ ವಿತರಿಸುವ ಬೃಹತ್ ಕಾರ್ಯಕ್ರಮ

ಮೈಸೂರು: 71 ಸಾವಿರ ಯುವಜನತೆಗೆ ‘ನೇಮಕಾತಿ ಪತ್ರ’ ವಿತರಿಸುವ ಬೃಹತ್ ಕಾರ್ಯಕ್ರಮ

267
0

ಮೈಸೂರು, ಮೇ 16: ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ರೋಜ್‌ಗಾರ್ ಮೇಳದಲ್ಲಿ ಮೈಸೂರಿನ ವಾಕ್ ಶ್ರಾವಣ ವಿದ್ಯಾ ಸಂಸ್ಥೆಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಪಾಲ್ಗೊಂಡರು.

ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮಾಧ್ಯಮದ ಮೂಲಕ ದೇಶದ 45 ಭಾಗಗಳಲ್ಲಿ ಏಕಕಾಲದಲ್ಲಿ ನಡೆದ, 71 ಸಾವಿರ ಯುವಜನತೆಗೆ ‘ನೇಮಕಾತಿ ಪತ್ರ’ ವಿತರಿಸುವ ಬೃಹತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

10 ಲಕ್ಷ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಳೆದ ವರ್ಷ ಅಕ್ಟೋಬರ್ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದರ ಮುಂದುವರೆದ ಭಾಗವಾಗಿ ಇಂದು 71,000 ಜನರಿಗೆ ನೇಮಕಾತಿ ಪತ್ರಗಳನ್ನು ದೇಶಾದ್ಯಂತ ವಿತರಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಸಂಸದ ಪ್ರತಾಪ್ ಸಿಂಹ, ಪೋಸ್ಟಲ್ ವಿಭಾಗದ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.