Friday, October 18, 2024
Friday, October 18, 2024

ಕ್ರಿಯೇಟಿವ್‌ ಕಾಲೇಜಿನ ಉಪನ್ಯಾಸಕ ಬಿ ರಾಘವೇಂದ್ರ ರಾವ್‌ ಅವರ 56ನೇ ಕೃತಿ ‘ಹಾವಿನ ಮನೆ’ ಬಿಡುಗಡೆ

ಕ್ರಿಯೇಟಿವ್‌ ಕಾಲೇಜಿನ ಉಪನ್ಯಾಸಕ ಬಿ ರಾಘವೇಂದ್ರ ರಾವ್‌ ಅವರ 56ನೇ ಕೃತಿ ‘ಹಾವಿನ ಮನೆ’ ಬಿಡುಗಡೆ

Date:

ಬೆಂಗಳೂರು, ಜೂ. 24: ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ ‘ಹಾವಿನ ಮನೆ’ ಪತ್ತೆದಾರಿ ಕಾದಂಬರಿ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಶಿವಾಜಿ ಸುರತ್ಕಲ್‌ ಚಲನಚಿತ್ರ ಖ್ಯಾತಿಯ ನಿರ್ದೇಶಕರಾದ ಆಕಾಶ್‌ ಶ್ರೀವತ್ಸ ಅವರು ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯಕ್ಕೆ ಪತ್ತೆದಾರಿ ಸಾಹಿತ್ಯದ ಅಗತ್ಯವಿದೆ. ಅದಕ್ಕೆ ಬಹುದೊಡ್ಡ ಓದುಗ ವರ್ಗವಿದೆ. ಈ ನಿಟ್ಟಿನಲ್ಲಿ ರಾಘವೇಂದ್ರ ರಾವ್ (ಅನು ಬೆಳ್ಳೆ) ಅವರ ʼಹಾವಿನ ಮನೆʼ ಮಹತ್ವದ ಕೃತಿಯಾಗಬಲ್ಲದು ಎಂದು ಅಭಿಪ್ರಾಯಪಟ್ಟರು.

ಆಧುನಿಕ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡು. ಯುವ ಲೇಖಕರಾಗಿ ಪ್ರಸಿದ್ಧಿಗೊಂಡು ಅನೇಕ ಪತ್ರಿಕೆಗಳಲ್ಲಿ ನಿರಂತರವಾಗಿ ಧಾರಾವಾಹಿಯಾಗಿ ಪ್ರಕಟಗೊಂಡ ಕಥೆಗಳ ಕರ್ತೃವಾಗಿ, ಗುರುತಿಸಿಕೊಂಡು ತಮ್ಮದೇ ಅನುಭವದ ವಿಶೇಷ ಶೈಲಿಯ ಕಥೆಗಳನ್ನು ಪೋಣಿಸಿದ ಲೇಖಕ ರಾಘವೇಂದ್ರ ರಾವ್‌ ಅವರು, ಅನುಬೆಳ್ಳೆ ಎಂಬ ಕಾವ್ಯನಾಮದಿಂದಲೇ ಹೆಚ್ಚಿನ ಓದುಗರಿಗೆ ಪರಿಚಿತರು. ವೃತ್ತಿಯಲ್ಲಿ ಉಪನ್ಯಾಸಕರು ಪ್ರವೃತ್ತಿಯಲ್ಲಿ ಕಥೆಗಾರರು. ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಓದುಗ ವರ್ಗವನ್ನು ಹೊಂದಿದ್ದಾರೆ. ಕೃತಿಕಾರ ರಾಘವೇಂದ್ರ ರಾವ್‌ ಅವರು ಪ್ರಸ್ತುತ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕ್ರಿಯೆಟಿವ್‌ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಲೇಖಕ ಬಿ ರಾಘವೇಂದ್ರ ರಾವ್‌ ಅವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!