ಮೈಸೂರು, ಏ.21: ವಿಶ್ವಕರ್ಮ ಯೋಜನೆಯ ಮೂಲಕ ಹಿಂದುಳಿದ ವರ್ಗಗಳ ಕಾಯಕ ಸಮುದಾಯಗಳ ಜನತೆಯ ಸ್ವಾಭಿಮಾನಿ ಬದುಕು ಕಟ್ಟಿಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಬಿಜೆಪಿ ಓಬಿಸಿ ಮೋರ್ಚಾದ ವತಿಯಿಂದ ಭಾನುವಾರ ಕಾಯಕ ಸಮುದಾಯಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಸಂಸದರಾದ ವಿಜಯ್ ಶಂಕರ್, ಮಾಜಿ ಸಚಿವರಾದ ಎಸ್.ವಿಶ್ವನಾಥ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ ರಾಜೇಂದ್ರ, ಶಾಸಕರಾದ ಟಿ.ಎಸ್. ಶ್ರೀವತ್ಸ, ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ಆರ್ ರಘು ಕೌಟಿಲ್ಯ, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷರಾದ ಎಲ್.ಆರ್.ಮಹದೇವಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.