Thursday, July 30, 2026
Thursday, July 30, 2026

50 ಸಾವಿರ ಉದ್ಯೋಗ ಸೃಷ್ಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

50 ಸಾವಿರ ಉದ್ಯೋಗ ಸೃಷ್ಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Date:

ಬೆಳಗಾವಿ: ಕಿತ್ತೂರಿನ ಬಳಿಯಿರುವ ಕೆಐಎಡಿಬಿ ಪ್ರದೇಶದಲ್ಲಿ 1,000 ಎಕೆರೆ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಿತ್ತೂರಿನ ಚನ್ನಮ್ಮ ಕೋಟೆ ಆವರಣದಲ್ಲಿ ರಾಜ್ಯಮಟ್ಟದ ಕಿತ್ತೂರು ಉತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ನೂತನ ಕೈಗಾರಿಕಾ ಟೌನ್ ಶಿಪ್ ಯೋಜನೆಯಿಂದ ಸುಮಾರು 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಚೆನ್ನಮ್ಮ ಅರಮನೆ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ 50 ಕೋಟಿ ಅನುದಾನ ನೀಡಿದ್ದರು. ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದಲ್ಲಿ ಇದೇ ಮೊದಲ ಬಾರಿಗೆ ಆಚರಿಸಲಾಗುತ್ತಿದೆ.

ಎರಡು ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣ ಮೇಲ್ದಂಡೆ ಸ್ಟೇಜ್ 3 ಯೋಜನೆ ವಿಚಾರ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿ ಯೋಜನೆ ಕೂಡ ಅಂತಿಮ ಹಂತದಲ್ಲಿದೆ. ಎರಡೂ ಪ್ರಮುಖ ಯೋಜನೆಗಳಿಗೆ ಒಪ್ಪಿಗೆ ಪಡೆದು ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!