Monday, February 24, 2025
Monday, February 24, 2025

ಅತಿಥಿ ಉಪನ್ಯಾಸಕರಿಗೆ ‘ಸರ್ಕಾರದ ಸಿಹಿ ಸುದ್ಧಿ’

ಅತಿಥಿ ಉಪನ್ಯಾಸಕರಿಗೆ ‘ಸರ್ಕಾರದ ಸಿಹಿ ಸುದ್ಧಿ’

Date:

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರ ಕೊನೆಗೂ ಸಂಕ್ರಾಂತಿಯ ಬೇವು ಬೆಲ್ಲ ನೀಡಿದೆ.

ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿಚ ಡಾ. ಅಶ್ವತ್ಥನಾರಾಯಣ ಅವರು ಸಮಿತಿಯ ವರದಿಯ ಆಧಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೈಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

ಯುಜಿಸಿ ಅರ್ಹತೆ ಇರುವ ಅತಿಥಿ ಉಪನ್ಯಾಸಕರಿಗೆ ಈ ಹಿಂದೆ 13 ಸಾವಿರ ನೀಡುತ್ತಿದ್ದು ಇನ್ನು ಮುಂದೆ ತಿಂಗಳಿಗೆ 32 ಸಾವಿರ ನೀಡಲಾಗುವುದು. ಯುಜಿಸಿ ಅರ್ಹತೆ ಇಲ್ಲದವರಿಗೆ 5 ವರ್ಷಕ್ಕಿಂತ ಹೆಚ್ಚಿನ ಅನುಭವ ಇರುವವರಿಗೆ 28 ಸಾವಿರ, 5 ವರ್ಷಕ್ಕಿಂತ ಕಡಿಮೆ ಅನುಭವ ಇರುವವರಿಗೆ 26 ಸಾವಿರ ನೀಡಲಾಗುವುದು.

ಯುಜಿಸಿ ಅರ್ಹತೆ ಇರುವವರು 5 ವರ್ಷಕ್ಕಿಂತ ಕಡಿಮೆ ಅನುಭವ ಇರುವವರಿಗೆ 30 ಸಾವಿರ ನೀಡಲಾಗುವುದು. ಈ ಹಿಂದೆ ಸೆಮಿಸ್ಟರ್ ಆಧಾರದಲ್ಲಿ ನೇಮಕಾತಿ ಆಗುತ್ತಿದ್ದು ಇನ್ನು ಮುಂದೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ ಮಾಡಲಾಗುವುದು.

ಪ್ರತಿ ತಿಂಗಳು 10ನೇ ತಾರೀಕಿನ ಒಳಗೆ ವೇತನ ನೀಡಲಾಗುವುದು. ಪ್ರತಿ ವರ್ಷವೂ ಅರ್ಜಿ ಸಲ್ಲಿಸಬೇಕು. ಹೆಚ್ಚು ಕಾರ್ಯಭಾರವನ್ನು ಕೂಡ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದು ಸೋಮವಾರದಿಂದ (ಜ.17) ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!