Tuesday, February 25, 2025
Tuesday, February 25, 2025

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

Date:

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಗಿಯಾಗಿ, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ) ಬಲೆ ಬೀಸಿದೆ. ತಲೆಮರೆಸಿಕೊಂಡ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ (ಎನ್.ಐ.ಎ) ಘೋಷಿಸಿದೆ. ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದರು.

ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನವನ್ನು (ಎನ್.ಐ.ಎ) ಘೋಷಿಸಿದೆ. ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ‌ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನವನ್ನು ಎನ್‌ಐಎ ಘೋಷಿಸಿದೆ. ಆರೋಪಿಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್‌ಐಎ ತಿಳಿಸಿದೆ.

ವಿಳಾಸ- ಪೊಲೀಸ್ ಅಧೀಕ್ಷಕರು, ರಾಷ್ಟ್ರೀಯ ತನಿಖಾ ದಳ (ಎನ್​ಐಎ), 8ನೇ ಮಹಡಿ, ಸರ್. ಎಂ ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071. ಮಾಹಿತಿ ನೀಡುವವರು ಇ-ಮೇಲ್ [email protected], ದೂರವಾಣಿ ಸಂಖ್ಯೆ 080-29510900/8904241100

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!