Home ಸುದ್ಧಿಗಳು ರಾಜ್ಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

393
1

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಗಿಯಾಗಿ, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ) ಬಲೆ ಬೀಸಿದೆ. ತಲೆಮರೆಸಿಕೊಂಡ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ (ಎನ್.ಐ.ಎ) ಘೋಷಿಸಿದೆ. ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದರು.

ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನವನ್ನು (ಎನ್.ಐ.ಎ) ಘೋಷಿಸಿದೆ. ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ‌ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನವನ್ನು ಎನ್‌ಐಎ ಘೋಷಿಸಿದೆ. ಆರೋಪಿಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್‌ಐಎ ತಿಳಿಸಿದೆ.

ವಿಳಾಸ- ಪೊಲೀಸ್ ಅಧೀಕ್ಷಕರು, ರಾಷ್ಟ್ರೀಯ ತನಿಖಾ ದಳ (ಎನ್​ಐಎ), 8ನೇ ಮಹಡಿ, ಸರ್. ಎಂ ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071. ಮಾಹಿತಿ ನೀಡುವವರು ಇ-ಮೇಲ್ [email protected], ದೂರವಾಣಿ ಸಂಖ್ಯೆ 080-29510900/8904241100

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.