Friday, September 11, 2026
Friday, September 11, 2026

ನಾಡಪ್ರಭು ಕೆಂಪೇಗೌಡ ಸದಾ ಸ್ಪೂರ್ತಿ: ಪ್ರಧಾನಿ ನರೇಂದ್ರ ಮೋದಿ

ನಾಡಪ್ರಭು ಕೆಂಪೇಗೌಡ ಸದಾ ಸ್ಪೂರ್ತಿ: ಪ್ರಧಾನಿ ನರೇಂದ್ರ ಮೋದಿ

Date:

ಬೆಂಗಳೂರು: ಜಗತ್ತಿನಾದ್ಯಂತ ಆಡಳಿತ, ವ್ಯಾಪಾರದ ರೂಪುರೇಷೆಗಳಲ್ಲಿ ಬದಲಾವಣೆಗಳಾದರೂ, ಕೂಡ ಬೆಂಗಳೂರಿನ ಆರ್ಥಿಕತೆ ನಿರಂತರವಾಗಿ ಅಭಿವೃದ್ಧಿಯಾಗುತ್ತಲೇ ಸಾಗುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಹಾಗೂ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ‘ಪ್ರಗತಿ ಪ್ರತಿಮೆ’ ಲೋಕಾರ್ಪಣೆ ಮಾಡಿದ ನಂತರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ ಕಲ್ಪನೆಯ ಬೆಂಗಳೂರಿನ ಸಮಗ್ರ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ. ವಾಣಿಜ್ಯ, ಸಂಸ್ಕೃತಿ, ಪರಂಪರೆ, ಆಡಳಿತದ ಸಮರ್ಪಕ ಸಂಯೋಜನೆಯಿಂದ ಕೆಂಪೇಗೌಡರು ಬೆಂಗಳೂರು ನಗರ ನಿರ್ಮಾಣಕ್ಕೆ ಬುನಾದಿ ಹಾಕಿದರು. ದೇಶದ ಮೊದಲ ಮೇಕ್ ಇನ್ ಇಂಡಿಯಾ ವಂದೇ ಭಾರತ ರೈಲು ಕರ್ನಾಟಕದಿಂದ ಲೋಕಾರ್ಪಣೆಗೊಂಡಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್ 2 ಅತ್ಯಂತ ಸುಂದರವಾಗಿದೆ.

ಸ್ಟಾರ್ಟ್ ಅಪ್‌ಗಳಿಂದ ಭಾರತ ಸಶಕ್ತಗೊಂಡಿದೆ. ವಂದೇ ಭಾರತ ರೈಲು ನವಭಾರತದ ನಿರ್ಮಾಣದ ಪ್ರತೀಕ. ವಂದೇ ಭಾರತ್ ರೈಲುಗಳು ಭಾರತೀಯ ರೈಲ್ವೇಗೆ ಹೊಸ ಆಯಾಮ ನೀಡಿವೆ‌. ಶ್ರೀಕೃಷ್ಣನ ಭಕ್ತರಾಗಿದ್ದ ಕನಕದಾಸರು ಸಹಬಾಳ್ವೆಯ ಸಂದೇಶ ಸಾರಿದರು. ವೀರ ವನಿತೆ ಒನಕೆ ಓಬವ್ವನ ಸಾಹಸ ಮನೋಭಾವ ಸದಾ ಸ್ಪೂರ್ತಿ ಎಂದು ಪ್ರಧಾನಿ ಪ್ರಶಂಸಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಭಗವಂತ್ ಖೂಬಾ, ಶೋಭಾ ಕರಂದ್ಲಾಜೆ, ಸಂಸದ ಸದಾನಂದಗೌಡ, ಸಚಿವರಾದ ಅರಗ ಜ್ಞಾನೇಂದ್ರ, ಸಿ. ಎನ್. ಅಶ್ವತ್ಥನಾರಾಯಣ, ಡಾ. ಕೆ. ಸುಧಾಕರ್, ವಿ. ಸುನೀಲ್ ಕುಮಾರ್, ಆರ್.ಅಶೋಕ, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!