ವಿಜಯಪುರ, ಜ.10: ವಿಜಯಪುರ ಬಸ್ ನಿಲ್ದಾಣದ ಮುಂಭಾಗದ ವೃತ್ತದಲ್ಲಿ ಕನ್ನಡ ನೆಲದ ವೀರವನಿತೆ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ – ಬಲಿದಾನಗೈದ ನಮ್ಮೆಲ್ಲರ ಹೆಮ್ಮೆಯ ಕಿತ್ತೂರು ರಾಣಿ ಚನ್ನಮ್ಮ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿ, ಬಳಿಕ ಬೂತನಾಳು ಗ್ರಾಮದಲ್ಲಿ “ಸೈಕ್ಲಿಂಗ್ ವೇಲೋಡ್ರಮ್” ಉದ್ಘಾಟಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಹೆಚ್.ಸಿ.ಮಹದೇವಪ್ಪ, ಶಿವಾನಂದ ಪಾಟೀಲ್, ಡಾ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಶ್ರೀ ವಚನಾನಂದ ಸ್ವಾಮೀಜಿ, ಮಾತೋಶ್ರೀ ಯೋಗೇಶ್ವರಿ ಮಾತಾಜಿ, ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಪ್ರಮುಖರು, ಮುಖಂಡರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.




By
ForthFocus™