Monday, February 24, 2025
Monday, February 24, 2025

ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

Date:

ಉಡುಪಿ, ಆ.12: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇದಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸಬಾರದು. ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬೇಕು ಹಾಗೂ ಸದರಿ ಕಾರ್ಯಕ್ರಮಗಳ ನಂತರ ಉಪಯೋಗಿಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.

ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯ್ದೆ, 1986 ರ ಸೆಕ್ಷನ್ 19 ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಉಲ್ಲಂಘಿಸಿದವರ ಮೇಲೆ ಆಯಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012, ಬೆಂಗಳೂರು, ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!