Home ಸುದ್ಧಿಗಳು ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಯು.ಟಿ ಖಾದರ್ ಆಯ್ಕೆ

ವಿಧಾನಸಭೆಯ ಸಭಾಧ್ಯಕ್ಷರಾಗಿ ಯು.ಟಿ ಖಾದರ್ ಆಯ್ಕೆ

243
0

ಬೆಂಗಳೂರು, ಮೇ 24: ವಿಧಾನಸಭೆಯ ಸಭಾಧ್ಯಕ್ಷರಾಗಿ ಶಾಸಕ ಯು.ಟಿ ಖಾದರ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು. ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರಿಂದ ಅಧಿಕಾರ ವಹಿಸಿಕೊಂಡರು.

ಬಳಿಕ ಮಾತನಾಡಿದ ಅವರು, ಎಲ್ಲಾ ಶಾಸಕರೂ ಒಟ್ಟಿಗೆ ಕೆಲಸ ಮಾಡಬೇಕಿದೆ. ಎಲ್ಲಾ ಶಾಸಕರ ಗೌರವ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ. ಸಂವಿಧಾನದ ಮೌಲ್ಯಗಳನ್ನು ಬಲಪಡಿಸಲು ಜತೆಯಾಗಿ ಕಾರ್ಯನಿರ್ವಹಿಸೋಣ ಎಂದರು.

ನೂತನ ಸಭಾಧ್ಯಕ್ಷರಿಗೆ ಅಭಿನಂದಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾದ ಯು.ಟಿ ಖಾದರ್ ಅವರಿಗೆ ಅಭಿನಂದನೆಗಳು.ತಮ್ಮ ಉಪಸ್ಥಿತಿಯಲ್ಲಿ ನಾಡಿನ ಜನರ ಸಮಸ್ಯೆಗಳ ಕುರಿತಾಗಿ ರಚನಾತ್ಮಕ ಚರ್ಚೆಯ ವಾತಾವರಣ ನಿರ್ಮಾಣವಾಗಲಿದೆ, ಸಂವಿಧಾನದ ಆಶಯದಂತೆ ನಿರ್ಲಿಪ್ತರಾಗಿ, ಪಕ್ಷಪಾತಿಯಲ್ಲದೆ ಸದನದ ಪ್ರತಿ ಸದಸ್ಯನ ಧ್ವನಿಗೆ ಬೆಂಬಲವಾಗಿ ನಿಲ್ಲುತ್ತೀರೆಂಬ ವಿಶ್ವಾಸ ನನಗಿದೆ. ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ನಿಮ್ಮ ಕಾರ್ಯಗಳಿಗೆ ಶುಭವಾಗಲಿ ಎಂದರು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.