Tuesday, July 28, 2026
Tuesday, July 28, 2026

ಶಾಲೆಗಳಲ್ಲಿ ಲಸಿಕಾ ಶಿಬಿರ: ಸಚಿವ ಸುಧಾಕರ್

ಶಾಲೆಗಳಲ್ಲಿ ಲಸಿಕಾ ಶಿಬಿರ: ಸಚಿವ ಸುಧಾಕರ್

Date:

ಬೆಂಗಳೂರು: ಮಕ್ಕಳ ಕಲಿಕೆ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಆದಷ್ಟು ಶೀಘ್ರವಾಗಿ ಪುನರಾರಂಭಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ, ಕ್ರಿಯಾಯೋಜನೆ ರೂಪಿಸಲು ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತಗಳ ಜೊತೆಗೆ ಸಮನ್ವಯದೊಂದಿಗೆ ಕಾರ್ಯೋನ್ಮುಖವಾಗಲಿದೆ. ಫಲಾನುಭವಿಗಳ ಸಂಖ್ಯೆ ಮತ್ತು ಲಸಿಕೆಯ ಲಭ್ಯತೆ ಆಧರಿಸಿ ಆಯಾ ಶಾಲೆಗಳಲ್ಲಿ ಲಸಿಕಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ಸಚಿವ ಸುಧಾಕರ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!