Wednesday, July 29, 2026
Wednesday, July 29, 2026

ಜನಿವಾರಕ್ಕೂ ಸಿಇಟಿ ಪರೀಕ್ಷೆಗೂ ಏನು ಸಂಬಂಧ? ಈ ಘಟನೆ ಹಿಂದೂ ಸಂಪ್ರದಾಯದ ಆಚಾರ ವಿಚಾರಕ್ಕೆ ನಡೆಸಿದ ಅಪಮಾನ: ಬಿ.ವೈ.ವಿಜಯೇಂದ್ರ

ಜನಿವಾರಕ್ಕೂ ಸಿಇಟಿ ಪರೀಕ್ಷೆಗೂ ಏನು ಸಂಬಂಧ? ಈ ಘಟನೆ ಹಿಂದೂ ಸಂಪ್ರದಾಯದ ಆಚಾರ ವಿಚಾರಕ್ಕೆ ನಡೆಸಿದ ಅಪಮಾನ: ಬಿ.ವೈ.ವಿಜಯೇಂದ್ರ

Date:

ಬೆಂಗಳೂರು, ಏ.20: ಬೀದರ್ ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ. ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು, ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಬಾಲ್ಯದಿಂದಲೂ ಕನಸು ಕಟ್ಟಿಕೊಂಡು ಭವಿಷ್ಯದ ತಿರುವಿನಲ್ಲಿ ಆಘಾತ ಎದುರಿಸಿ ವಿದ್ಯಾರ್ಥಿಯೊಬ್ಬನ ಇಂಜಿನಿಯರಿಂಗ್ ಪದವಿಯ ಕನಸಿನ ಮೇಲೆ ಅಟ್ಟಹಾಸಗೈದ ಸಿಇಟಿ ಪರೀಕ್ಷಾ ಸಿಬ್ಬಂದಿಯ ವರ್ತನೆ ಅತ್ಯಂತ ಖಂಡನೀಯ. ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ, ಆದರೆ ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು, ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ? ಎಂಬುದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು. ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಈ ಸಂಬಂಧವಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದೂ ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳಲು ಮುಂದಾಗಲಿ. ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿದಕ್ಕೆ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ವಿಜಯೇಂದ್ರ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!