Saturday, February 7, 2026
Saturday, February 7, 2026

ಬಾವಿಗೆ ಬಿದ್ದ ಕಾಡುಹಂದಿಯ ರಕ್ಷಣೆ

ಬಾವಿಗೆ ಬಿದ್ದ ಕಾಡುಹಂದಿಯ ರಕ್ಷಣೆ

Date:

ಕುಮಟಾ: ರಾತ್ರಿ ವೇಳೆ ಆಹಾರ ಅರಸಿ ಬಂದಿದ್ದ ಕಾಡುಹಂದಿಯೊಂದು ಆಯತಪ್ಪಿ ತೆರೆದ ಬಾವಿಗೆ ಬಿದ್ದು 7-8 ಗಂಟೆಯ ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ವನ್ಯಜೀವಿ ರಕ್ಷಕರ ಸಹಾಯದಿಂದ ರಕ್ಷಿಸಿದ ಘಟನೆ ಕುಮಟಾ ತಾಲೂಕಿನ ಗುಡ್ಕಾಗಲ್ ನಲ್ಲಿ ನಡೆದಿದೆ.‌

ಗುಡ್ಕಾಗಲಿನ ಬಲಿಂದ್ರ ಹರಿಕಂತ್ರ ಎಂಬುವವರ ಮನೆಯ 15 ಅಡಿ ಆಳದ ಬಾವಿಯಲ್ಲಿ ಕಾಡುಹಂದಿಯೊಂದು ಬಿದ್ದು ಮೇಲೆ ಬರಲಾರದೇ ನರಳುತ್ತಿತ್ತು. ಮನೆಯವರು ಬೆಳಗ್ಗಿನ ಜಾವ ನೀರು ತರಲು ಹೋದಾಗ ಗಮನಿಸಿ ಕುಮಟಾ ಅರಣ್ಯ ಇಲಾಖೆಗೆ ತಿಳಿಸಿದರು.

ತಕ್ಷಣ ಸ್ಥಳಕ್ಕೆ ಧಾವಿಸಿದ ಉಪವಲಯ ಅರಣ್ಯಾಧಿಕಾರಿಗಳಾದ ರಾಘವೇಂದ್ರ ನಾಯ್ಕ, ಹೂವಣ್ಣ ಗೌಡ, ಅರಣ್ಯ ರಕ್ಷಕ ಪ್ರಮೋದ, ವನ್ಯಜೀವಿ ರಕ್ಷಕ ಪವನ ನಾಯ್ಕ, ಬೀರ ಗೌಡ, ಸುರೇಶ್ ನಾಯ್ಕ ಹಾಗೂ ಸ್ಥಳೀಯರು ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕಾಡುಹಂದಿಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!