Thursday, September 3, 2026
Thursday, September 3, 2026

ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

Date:

ಉಡುಪಿ, ಆ.9: ದೇಶದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ರಾಜ್ಯದ ಸಂಸದರ ಶಾಸಕರ ನಿಯೋಗ ಭೇಟಿ ಮಾಡಿ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕ, ಮೈಲುತುತ್ತಿಗೆ ಪ್ರಸ್ತುತ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುತ್ತಿದ್ದು, ಅಡಿಕೆ ಬೆಳೆ ಕೃಷಿ ವ್ಯಾಪ್ತಿಯೊಳಗೆ ಬರುವುದರಿಂದ ಜಿಎಸ್‌ಟಿ ಶೇ.5ಕ್ಕೆ ಇಳಿಕೆ ಮಾಡಿ ಅಡಿಕೆ ಬೆಳೆಗಾರರ ರಕ್ಷಣೆಗೆ ಬರಬೇಕೆಂದು ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿ ಮೈಲುತುತ್ತು ಸೇರಿದಂತೆ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕಗಳ ಜಿ.ಎಸ್.ಟಿ ಇಳಿಕೆ ಬಗ್ಗೆ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯದ ಮಾಜಿ ಗೃಹ ಸಚಿವ ಹಾಗೂ ಶಾಸಕರಾದ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಸತೀಶ್ಚಂದ್ರ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯನಾರಾಯಣ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!