Home ಸುದ್ಧಿಗಳು ರಾಷ್ಟ್ರೀಯ ಅಯೋಧ್ಯೆಗೆ ಬೆಂಗಳೂರಿನಿಂದ ವಿಶೇಷ ವಿಮಾನ ಸೇವೆ ಆರಂಭ

ಅಯೋಧ್ಯೆಗೆ ಬೆಂಗಳೂರಿನಿಂದ ವಿಶೇಷ ವಿಮಾನ ಸೇವೆ ಆರಂಭ

185
0

ನವದೆಹಲಿ, ಜ.17: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಬೆಂಗಳೂರು ಮತ್ತು ಕೋಲ್ಕತ್ತಾದಿಂದ ಅಯೋಧ್ಯೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸೇವೆಯನ್ನು ಉದ್ಘಾಟಿಸಿದರು.

ಬೆಂಗಳೂರು-ಅಯೋಧ್ಯೆ ಮಾರ್ಗದಲ್ಲಿ ಮೊದಲ ವಿಮಾನವು ಬೆಳಿಗ್ಗೆ 8:05 ಕ್ಕೆ ಹೊರಟು 10:35 ಕ್ಕೆ ಅಯೋಧ್ಯೆಗೆ ತಲುಪಲಿದೆ. ಹಿಂದಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3:40 ಕ್ಕೆ ಹೊರಟು ಸಂಜೆ 6:01 ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಕೋಲ್ಕತ್ತಾ ಮತ್ತು ಅಯೋಧ್ಯೆ ನಡುವಿನ ಮಾರ್ಗದಲ್ಲಿ, ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11:05 ಕ್ಕೆ ಹೊರಟು ಮಧ್ಯಾಹ್ನ 12:50 ಕ್ಕೆ ಕೋಲ್ಕತ್ತಾದಲ್ಲಿ ಇಳಿಯಲಿದೆ. ಕೋಲ್ಕತ್ತಾದಿಂದ ಅಯೋಧ್ಯೆಗೆ ಹಿಂದಿರುಗುವ ವಿಮಾನವು ಮಧ್ಯಾಹ್ನ 1:25 ಕ್ಕೆ ಟೇಕ್ ಆಫ್ ಆಗಲಿದ್ದು, ಮಧ್ಯಾಹ್ನ 3:10 ಕ್ಕೆ ಅಯೋಧ್ಯೆಯನ್ನು ತಲುಪಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.