Friday, September 11, 2026
Friday, September 11, 2026

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

Date:

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್ ಲಾಹಿರಿ ಅವರನ್ನು ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅವರು ಪ್ರಸ್ತುತ ಉಪಾಧ್ಯಕ್ಷರಾದ ಸುಮನ್ ಕೆ. ಬೆರಿ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಲಾಹಿರಿ ಜೊತೆಗೆ, ಸರ್ಕಾರವು ರಾಜೀವ್ ಗೌಬಾ, ಪ್ರೊ. ಕೆ. ವಿ. ರಾಜು, ಪ್ರೊ. ಗೋಬರ್ಧನ್ ದಾಸ್, ಡಾ. ಎಂ. ಶ್ರೀನಿವಾಸ್ ಮತ್ತು ಪ್ರೊ. ಅಭಯ್ ಕರಂಡಿಕರ್ ಅವರನ್ನು ನೀತಿ ಆಯೋಗದ ಪೂರ್ಣಾವಧಿ ಸದಸ್ಯರನ್ನಾಗಿ ನೇಮಿಸಿದೆ.

ನೀತಿ ಆಯೋಗದ ಹೊಸದಾಗಿ ನೇಮಕಗೊಂಡ ಉಪಾಧ್ಯಕ್ಷ ಅಶೋಕ್ ಕುಮಾರ್ ಲಾಹಿರಿ ನವದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿಯಾದರು. ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ನೀತಿಯಲ್ಲಿ ಲಾಹಿರಿ ಅವರ ಶ್ರೀಮಂತ ಅನುಭವವು ಭಾರತದ ಸುಧಾರಣಾ ಪ್ರಯಾಣ ಮತ್ತು ವಿಕ್ಷಿತ ಭಾರತವಾಗುವತ್ತ ಸಾಗುವ ಪ್ರಯಾಣವನ್ನು ಹೆಚ್ಚು ಬಲಪಡಿಸುತ್ತದೆ ಎಂದು ಪ್ರಧಾನಿ ಹೇಳಿದರು. ಲಾಹ್ರಿ ಅವರ ಪ್ರಯತ್ನಗಳು ರಾಷ್ಟ್ರದಲ್ಲಿ ನೀತಿ ನಿರೂಪಣೆಗೆ ಶಕ್ತಿ ತುಂಬುತ್ತವೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ನೀತಿ ಆಯೋಗದ ಹೊಸದಾಗಿ ನೇಮಕಗೊಂಡ ಪೂರ್ಣಾವಧಿ ಸದಸ್ಯರಿಗೂ ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!