Home ಸುದ್ಧಿಗಳು ರಾಷ್ಟ್ರೀಯ ರಾಷ್ಟ್ರೀಯ ಸಂವಿಧಾನ ದಿನದ ಆಚರಣೆಯ ಮೂಲಕ ಜನರಲ್ಲಿ ಸ್ಪೂರ್ತಿ ತುಂಬಲು ಬಿಜೆಪಿ ಸರ್ಕಾರ ಪ್ರಯತ್ನಿಸಿದೆ: ಪ್ರಧಾನಿ...

ರಾಷ್ಟ್ರೀಯ ಸಂವಿಧಾನ ದಿನದ ಆಚರಣೆಯ ಮೂಲಕ ಜನರಲ್ಲಿ ಸ್ಪೂರ್ತಿ ತುಂಬಲು ಬಿಜೆಪಿ ಸರ್ಕಾರ ಪ್ರಯತ್ನಿಸಿದೆ: ಪ್ರಧಾನಿ ನರೇಂದ್ರ ಮೋದಿ

122
0

ಗಯಾ (ಬಿಹಾರ), ಏ.16: ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಸಂವಿಧಾನವನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳವಾರ ಬೆಳಗ್ಗೆ ಬಿಹಾರದ ಗಯಾದ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಜನರನ್ನು ತಪ್ಪುದಾರಿಗೆ ಎಳೆಯಲು ವಿರೋಧ ಪಕ್ಷಗಳು ಸುಳ್ಳನ್ನು ನಿರೂಪಣೆ ಮಾಡುತ್ತಿದೆ. ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ದೇಶದಲ್ಲಿ ರಾಷ್ಟ್ರೀಯ ಸಂವಿಧಾನ ದಿನವನ್ನು ಸಾಂಸ್ಥಿಕಗೊಳಿಸುವ ಮೂಲಕ ಜನರಲ್ಲಿ ಸಂವಿಧಾನದ ನಿಜವಾದ ಸ್ಪೂರ್ತಿಯನ್ನು ತುಂಬಲು ಬಿಜೆಪಿ ಪ್ರಯತ್ನಿಸಿದೆ ಎಂದರು.
ಪ್ರತಿಪಕ್ಷಗಳ ನೀಚ ತಂತ್ರವನ್ನು ದೇಶದ ಜನತೆ ಚುನಾವಣೆಯಲ್ಲಿ ಮತದ ಮೂಲಕ ಸೋಲಿಸಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಸನಾತನ ಧರ್ಮವನ್ನು ಅವಮಾನಿಸುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.