Sunday, September 6, 2026
Sunday, September 6, 2026

ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ: ನಿತಿನ್ ಗಡ್ಕರಿ

ರಸ್ತೆ ಅಪಘಾತದ ಸಂತ್ರಸ್ತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ: ನಿತಿನ್ ಗಡ್ಕರಿ

Date:

ನವದೆಹಲಿ, ಜ.8: ಪ್ರಧಾನಿ ನರೇಂದ್ರ ಮೋದಿ ರಸ್ತೆ ಅಪಘಾತದ ಸಂತ್ರಸ್ತರಿಗೆ ಶೀಘ್ರದಲ್ಲೇ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ ಎಂದು ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದರು. ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಾರಿಗೆ ಸಚಿವರು ಮತ್ತು ಸಾರಿಗೆ ಅಭಿವೃದ್ಧಿ ಮಂಡಳಿಯ 43 ನೇ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗಡ್ಕರಿ, ಈ ವಿಷಯ ತಿಳಿಸಿದರು.

ಈ ಯೋಜನೆಯಡಿಯಲ್ಲಿ, ರಸ್ತೆ ಅಪಘಾತದ ಸಂತ್ರಸ್ತರಿಗೆ ಕನಿಷ್ಠ ಏಳು ದಿನಗಳವರೆಗೆ ಒಂದು ಲಕ್ಷ 50 ಸಾವಿರ ರೂಪಾಯಿಗಳವರೆಗೆ ನಗದು ರಹಿತ ಚಿಕಿತ್ಸೆಗೆ ಅರ್ಹತೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಯಾವುದೇ ರಸ್ತೆಯಲ್ಲಿ ಅಪಘಾತಗಳು ಸಂಭವಿಸಿದಲ್ಲಿ, ಸಂತ್ರಸ್ತರನ್ನು ಆಸ್ಪತ್ರೆಗೆ ತಲುಪಲು ಸಹಾಯ ಮಾಡುವ ವ್ಯಕ್ತಿಗೆ 25 ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಗಡ್ಕರಿ ಹೇಳಿದರು.

ಈ ಯೋಜನೆಯ ಪೈಲಟ್ ಯೋಜನೆಯನ್ನು ಇತ್ತೀಚೆಗೆ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢ ಸೇರಿದಂತೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!