Friday, May 15, 2026
Friday, May 15, 2026

ಗೋಡಂಬಿ ಉದ್ಯಮಿಗಳ ಜೊತೆಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ

ಗೋಡಂಬಿ ಉದ್ಯಮಿಗಳ ಜೊತೆಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ

Date:

ನವದೆಹಲಿ, ಮೇ 9: ಸಂಸದ ಕೋಟ ಶ್ರೀನಿವಾಸ ಪೂಜಾರಿ, ಅಖಿಲ ಭಾರತ ಗೋಡಂಬಿ ಉದ್ಯಮದ ಸಂಘದ ಅಧ್ಯಕ್ಷ ಬೋಳ ರಾಹುಲ್ ಕಾಮತ್ ಮತ್ತು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತಿತರರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಗೋಡಂಬಿ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಗೋಡಂಬಿ ಉದ್ಯಮದ ಹಿತಾಸಕ್ತಿ ಕಾಪಾಡುವುದರಿಂದ ಗೇರುಬೀಜದ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರಿಗೆ ಬದುಕು ಕಟ್ಟಿಕೊಡಲು ಸಾಧ್ಯವಿದೆ, ಆರ್ಥಿಕ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಗೊಳ್ಳಲಿದೆ ಎಂದು ಕೇಂದ್ರ ಸಚಿವರಿಗೆ ವಿವರಿಸಿದ್ದು ಭಾರತದ ಮಾರುಕಟ್ಟೆಗೆ ಹೊರದೇಶದ ಗೋಡಂಬಿ ಆಮದಿನ ಹೆಸರಿನಲ್ಲಿ ಸುಂಕ ಕಡಿತಗೊಳಿಸುವಿಕೆ, ನಿಯಮ ರಹಿತವಾಗಿ ಗೋಡಂಬಿ ಸಾಗಾಟ, ಭಾರತವು ಸೇರಿ ಅನ್ಯ ರಾಷ್ಟ್ರಗಳಲ್ಲಿ ತಿರಸ್ಕರಿಸಲ್ಪಟ್ಟ ಕಳಪೆ ಗುಣಮಟ್ಟದ ನುಚ್ಚು ಗೋಡಂಬಿಗಳನ್ನು ಪಶು ಆಹಾರ ಉತ್ಪಾದಿಸುವಿಕೆಯ ಹೆಸರಲ್ಲಿ ಸುಂಕ ವಿನಾಯಿತಿಯೊಂದಿಗೆ ಖರೀದಿಸಿ ಮಾರುಕಟ್ಟೆಯಲ್ಲಿ ಉತ್ಪಾದಿತ ಗೋಡಂಬಿಗೆ ಸಮನಾಗಿ ಮಾರಾಟ ಮಾಡಿ ನೈಜ ಉದ್ಯಮಕ್ಕೆ ಬೀಳುವ ಹೊಡೆತಗಳ ಬಗ್ಗೆ ನಿಯೋಗವು ಸಚಿವರಿಗೆ ವಿವರಿಸಲಾಗಿದೆ.

ಕೆಲವೆಡೆ ನೈಜ ಗೋಡಂಬಿಯನ್ನು ಹುರಿದ ಗೋಡಂಬಿ ಎಂದು ಘೋಷಿಸಿ, ದರದ ವ್ಯತ್ಯಯ ಮತ್ತು ಸಂಶೋಧನಾ ಸಂಸ್ಥೆಗಳ ತಪಾಸಣೆಯಿಂದ ಉದ್ಯಮದಲ್ಲಿ ಅನಗತ್ಯ ಗೊಂದಲ ಉಂಟಾಗುತ್ತಿದ್ದು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಉದ್ಯಮವನ್ನು ಉಳಿಸಿ ಬೆಳೆಸಲು ಸಹಕರಿಸಬೇಕೆಂದು ವಿನಂತಿಸಲಾಯಿತು.
ಸುದೀರ್ಘ ಚರ್ಚೆಯ ನಂತರ ಸ್ಥಳದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಇನ್ನು ಮುಂದೆ ಅಕ್ರಮ ಗೋಡಂಬಿ ಆಮದಿನ ಬಗ್ಗೆ ಕಟ್ಟು ನಿಟ್ಟಾಗಿ ಮಾರ್ಗಸೂಚಿ ರಚಿಸುವಂತೆ ಪಶು ಆಹಾರಕ್ಕೆ ಬೆಳೆಸುವ ಹೆಸರಲ್ಲಿ ಸುಂಕ ರಹಿತ ಗೋಡಂಬಿ ಆಮದನ್ನು ನಿಲ್ಲಿಸುವಂತೆ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ಮೂಲಕ ಗುಣಮಟ್ಟವನ್ನು ತೀವ್ರ ಪರಿಶೀಲನೆಗೊಳಪಡಿಸುವಂತೆ ಸಚಿವರು ನಿರ್ದೇಶಿಸಿದರು. ಅಕ್ರಮ ಆಮದುಗಳನ್ನು ನಿಲ್ಲಿಸಿ ಕಾನೂನು ಚೌಕಟ್ಟಿನಲ್ಲಿ ದೇಶಿಯ ಮಾನದಂಡದಡಿ ಮಾತ್ರ ಆಮದಿಗೆ ಅವಕಾಶ ನೀಡಲು ಆದೇಶಿಸಿದರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎರಡನೇ ಆವೃತ್ತಿಯ ಎಸ್.ಆರ್.ಎಸ್ ಪ್ರೀಮಿಯರ್ ಲೀಗ್ 2026

ಬಾರಕೂರು, ಮೇ 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ...

ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ....

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ....

ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

ಕೋಟೇಶ್ವರ, ಮೇ 14: ದೃಢತೆಯಿಂದ ಕೂಡಿದ ಅವಿರತವಾದ ಪರಿಶ್ರಮ, ತಾಳ್ಮೆ ಮತ್ತು...
error: Content is protected !!