Wednesday, July 29, 2026
Wednesday, July 29, 2026

DELHI ELECTION RESULTS ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿಗೆ ಭಾರೀ ಮುನ್ನಡೆ; ಆಪ್ ಹ್ಯಾಟ್ರಿಕ್ ಕನಸು ಭಗ್ನ

DELHI ELECTION RESULTS ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿಗೆ ಭಾರೀ ಮುನ್ನಡೆ; ಆಪ್ ಹ್ಯಾಟ್ರಿಕ್ ಕನಸು ಭಗ್ನ

Date:

ನವದೆಹಲಿ, ಫೆ.8: ಒಟ್ಟು 70 ಸ್ಥಾನವಿರುವ ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು ಬಿಜೆಪಿ 48 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡು ಬಹುಮತ ಪಡೆಯಲು ಅಗತ್ಯವಿದ್ದ 36 ಸಂಖ್ಯೆಯನ್ನು ಸುಲಭವಾಗಿ ದಾಟಿದ್ದು, ತನ್ಮೂಲಕ 27 ವರ್ಷಗಳ ನಂತರ ದೆಹಲಿಯ ಗದ್ದುಗೆ ಏರಲು ಸಿದ್ದವಾಗಿದೆ. ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ 22 ಕಡೆಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಇಲ್ಲಿಯವರೆಗೂ ಖಾತೆ ತೆರೆಯಲಿಲ್ಲ.

ಮೋದಿ ನೇತೃತ್ವ: ಬಿಜೆಪಿ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ‘ದೆಹಲಿ ಚಲಿ ಮೋದಿ ಕೆ ಸಾಥ್’ ಎಂಬ ಘೋಷಣೆಯನ್ನು ಹೊಂದಿತ್ತು. ಬಿಜೆಪಿ ತನ್ನ ಪ್ರಚಾರವನ್ನು ದೆಹಲಿ ಕೇಂದ್ರಿತ ಸಮಸ್ಯೆಗಳು ಮತ್ತು ಮುಂದಿನ ಐದು ವರ್ಷಗಳ ಕಾಲ ರಾಷ್ಟ್ರ ರಾಜಧಾನಿಗಾಗಿ ತನ್ನ ಯೋಜನೆಯ ಮೇಲೆ ಕೇಂದ್ರೀಕರಿಸಿತು.

ಆಪ್ ಹ್ಯಾಟ್ರಿಕ್ ಕನಸು ಭಗ್ನ: ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆಯಿದ್ದ ಆಮ್ ಆದ್ಮಿ ಪಕ್ಷವು 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಭ್ರಷ್ಟಾಚಾರ ವಿರೋಧಿ ನಿಲುವಿನಿಂದ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷವು, ಭ್ರಷ್ಟಾಚಾರ ಆರೋಪಗಳಿಂದ ಬಳಲಿ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಂಗಳುಗಟ್ಟಲೆ ಜೈಲಿನಲ್ಲಿ ಕಳೆದ ವಿಚಾರ ಆಪ್ ಗೆ ಹಿನ್ನಡೆ ಉಂಟುಮಾಡಿತು.

ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ: 1998 ರಿಂದ 2013 ರವರೆಗೆ ದೆಹಲಿಯನ್ನು ಆಳಿದ ಕಾಂಗ್ರೆಸ್, ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾದ ನಂತರ ಈ ಬಾರಿ ಮತ್ತೊಮ್ಮೆ ಯಾವುದೇ ಖಾತೆ ತೆರೆಯದೆ ಹ್ಯಾಟ್ರಿಕ್ ಶೂನ್ಯಕ್ಕೆ ತೃಪ್ತಿ ಪಡೆಯಲಿದೆ.

ಬಿಜೆಪಿ ಸಂಭ್ರಮಾಚರಣೆ: ಮ್ಯಾಜಿಕ್ ಸಂಖ್ಯೆ ದಾಟಿದ ಬೆನ್ನಲ್ಲೇ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಆರಂಭವಾಗಿದೆ.

2020 ರಲ್ಲಿ ಹೀಗಿತ್ತು ಫಲಿತಾಂಶ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 8 ಸ್ಥಾನ ಪಡೆದಿತ್ತು. ಕಾಂಗ್ರೆಸ್ ಯಾವುದೇ ಖಾತೆ ತೆರೆಯಲಿಲ್ಲ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!