Sunday, February 23, 2025
Sunday, February 23, 2025

ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟ: ಎಂಟು ಸಾವು, ಹಲವರಿಗೆ ಗಾಯ, 40 ವಾಹನಗಳು ಬೂದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟ: ಎಂಟು ಸಾವು, ಹಲವರಿಗೆ ಗಾಯ, 40 ವಾಹನಗಳು ಬೂದಿ

Date:

ಯು.ಬಿ.ಎನ್.ಡಿ., ಡಿ.20: ಶುಕ್ರವಾರ ನಸುಕಿನ ವೇಳೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಬೃಹತ್ ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡು ಎಂಟು ಜನರು ಸಾವನ್ನಪ್ಪಿ ಹಲವರಿಗೆ ತೀವ್ರ ಸುಟ್ಟಗಾಯಗಳಾಗಿವೆ. ಸುಮಾರು 40 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯ ನಂತರ 39 ಜನರನ್ನು ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಭೇಟಿಯಾಗಲು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಆಸ್ಪತ್ರೆಗೆ ಭೇಟಿ ನೀಡಿದರು. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ಪೆಟ್ರೋಲ್ ಪಂಪ್ ಬಳಿಯೇ ಸ್ಫೋಟ ಸಂಭವಿಸಿದೆ.

ಏನಾಗಿತ್ತು? ಅಧಿಕಾರಿಗಳ ಪ್ರಕಾರ, ಎಲ್‌ಪಿಜಿ ತುಂಬಿದ ಟ್ಯಾಂಕರ್‌ ಅಜ್ಮೀರ್‌ನಿಂದ ಜೈಪುರಕ್ಕೆ ಬರುತ್ತಿತ್ತು. ಬೆಳಗಿನ ಜಾವ 5.44ರ ಸುಮಾರಿಗೆ ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಜೈಪುರದಿಂದ ಬರುತ್ತಿದ್ದ ಟ್ರಕ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದು, ಸ್ವಲ್ಪ ಸಮಯದೊಳಗೆ ಇಡೀ ಪ್ರದೇಶ ಬೆಂಕಿಯ ಚೆಂಡಾಗಿದೆ. 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಆವರಿಸಿದ್ದು, ದಟ್ಟವಾದ ಕಪ್ಪು ಹೊಗೆ ಬಾನೆತ್ತರಕ್ಕೆ ವ್ಯಾಪಿಸಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!