Wednesday, July 22, 2026
Wednesday, July 22, 2026

ನಾಳೆಯಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭ

ನಾಳೆಯಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭ

Date:

ನವದೆಹಲಿ, ಜು.19: ಮಳೆಗಾಲದ ಅಧಿವೇಶನವು ನಾಳೆಯಿಂದ ಪ್ರಾರಂಭವಾಗಿ ಮುಂದಿನ ತಿಂಗಳ 13 ರವರೆಗೆ ನಡೆಯಲಿದೆ. ಅಧಿವೇಶನದ ಸಂದರ್ಭದಲ್ಲಿ, ಹಲವಾರು ಪ್ರಮುಖ ಶಾಸನಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಮಳೆಗಾಲದ ಅಧಿವೇಶನದ ಮುನ್ನಾದಿನ, ಸರ್ಕಾರ ಭಾನುವಾರ ಸಂಸತ್ ಭವನದ ಅನೆಕ್ಸ್‌ನಲ್ಲಿ ಸರ್ವಪಕ್ಷ ಸಭೆ ಕರೆದಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ರಾಜ್ಯಸಭೆಯಲ್ಲಿ ಸದನದ ನಾಯಕ ಜಗತ್ ಪ್ರಕಾಶ್ ನಡ್ಡಾ, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರು ಅರ್ಜುನ್ ರಾಮ್ ಮೇಘವಾಲ್ ಮತ್ತು ಡಾ. ಎಲ್. ಮುರುಗನ್ ಸಭೆಯಲ್ಲಿ ಉಪಸ್ಥಿತರಿದ್ದರು. ಅಪ್ನಾ ದಳ ನಾಯಕ ಅನುಪ್ರಿಯಾ ಪಟೇಲ್, ಜೆಡಿಯು ನಾಯಕ ಸಂಜಯ್ ಝಾ, ಟಿಡಿಪಿ ನಾಯಕ ಲಾವು ಶ್ರೀಕೃಷ್ಣ ದೇವರಾಯಲು, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಸಮಾಜವಾದಿ ಪಕ್ಷದ ನಾಯಕ ಧರ್ಮೇಂದ್ರ ಯಾದವ್, ಜಾರ್ಖಂಡ್ ಮುಕ್ತಿ ಮೋರ್ಚ್ ರಾಜ್ಯಸಭಾ ಸಂಸದೆ ಮಹುವಾ ಮಾಜಿ ಜೊತೆಗೆ 40 ರಾಜಕೀಯ ಪಕ್ಷಗಳ 50 ಕ್ಕೂ ಹೆಚ್ಚು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!