Sunday, February 23, 2025
Sunday, February 23, 2025

ಲೇಖಕಿ ಗೀತಾ ಮೆಹ್ತಾ ನಿಧನ

ಲೇಖಕಿ ಗೀತಾ ಮೆಹ್ತಾ ನಿಧನ

Date:

ನವದೆಹಲಿ, ಸೆ. 17: ಖ್ಯಾತ ಲೇಖಕಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಹಿರಿಯ ಸಹೋದರಿ ಗೀತಾ ಮೆಹ್ತಾ ಅವರು ವಯೋಸಹಜ ಕಾಯಿಲೆಗಳಿಂದಾಗಿ ಶನಿವಾರ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಪುತ್ರನನ್ನು ಅಗಲಿದ್ದಾರೆ. ಖ್ಯಾತ ಲೇಖಕಿ, ಸಾಕ್ಷ್ಯಚಿತ್ರ ನಿರ್ಮಾಪಕಿ ಮತ್ತು ಪತ್ರಕರ್ತೆ ಗೀತಾ ಮೆಹ್ತಾ ಅವರು ನವೀನ್ ಪಟ್ನಾಯಕ್ ಮತ್ತು ಉದ್ಯಮಿ ಪ್ರೇಮ್ ಪಟ್ನಾಯಕ್ ಅವರ ಹಿರಿಯ ಸಹೋದರಿ. 1943 ರಲ್ಲಿ ದೆಹಲಿಯಲ್ಲಿ ಬಿಜು ಪಟ್ನಾಯಕ್ ಮತ್ತು ಗ್ಯಾನ್ ಪಟ್ನಾಯಕ್ ದಂಪತಿಗೆ ಜನಿಸಿದ ಅವರು ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದರು. ಅವರು ‘ಕರ್ಮ ಕೋಲಾ’, ‘ಸ್ನೇಕ್ ಆಂಡ್ ಲ್ಯಾಡರ್ಸ್’, ‘ಎ ರಿವರ್ ಸೂತ್ರ’, ‘ರಾಜ್’ ಮತ್ತು ‘ದಿ ಎಟರ್ನಲ್ ಗಣೇಶ’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಈ ಹಿಂದೆ ಭುವನೇಶ್ವರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಪಟ್ನಾಯಕ್ ಅವರಂತಹ ಮುಖ್ಯಮಂತ್ರಿಯನ್ನು ಹೊಂದಲು ಒಡಿಶಾದ ಜನರು ಅದೃಷ್ಟವಂತರು ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಸಂತಾಪ: ಖ್ಯಾತ ಬರಹಗಾರ್ತಿ ಶ್ರೀಮತಿ ಗೀತಾ ಮೆಹ್ತಾ ಜಿ ಅವರ ನಿಧನದಿಂದ ನಾನು ದುಃಖಿತನಾಗಿದ್ದೇನೆ. ಅವರು ಬಹುಮುಖಿ ವ್ಯಕ್ತಿತ್ವವನ್ನು ಹೊಂದಿದ್ದರು, ಅವರ ಬುದ್ಧಿವಂತಿಕೆ ಮತ್ತು ಬರವಣಿಗೆ ಮತ್ತು ಚಲನಚಿತ್ರ ನಿರ್ಮಾಣದ ಬಗ್ಗೆ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದರು. ಅವರು ಪ್ರಕೃತಿ ಮತ್ತು ನೀರಿನ ಸಂರಕ್ಷಣೆಯ ಬಗ್ಗೆಯೂ ಉತ್ಸುಕರಾಗಿದ್ದರು. ಈ ದುಃಖದ ಸಮಯದಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜಿ ಮತ್ತು ಇಡೀ ಕುಟುಂಬದೊಂದಿಗೆ ನಾನು ಇದ್ದೇನೆ ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ ತೀವ್ರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!