Wednesday, September 2, 2026
Wednesday, September 2, 2026

ಒಡಿಶಾ ಸರ್ಕಾರದ ಐತಿಹಾಸಿಕ ನಿರ್ಧಾರ- ಗುತ್ತಿಗೆ ನೇಮಕಾತಿ ವ್ಯವಸ್ಥೆ ರದ್ದು, 57 ಸಾವಿರ ಗುತ್ತಿಗೆ ನೌಕರರು ಖಾಯಂ

ಒಡಿಶಾ ಸರ್ಕಾರದ ಐತಿಹಾಸಿಕ ನಿರ್ಧಾರ- ಗುತ್ತಿಗೆ ನೇಮಕಾತಿ ವ್ಯವಸ್ಥೆ ರದ್ದು, 57 ಸಾವಿರ ಗುತ್ತಿಗೆ ನೌಕರರು ಖಾಯಂ

Date:

ಭುವನೇಶ್ವರ್: ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಒಡಿಶಾ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಗುತ್ತಿಗೆ ನೇಮಕಾತಿ ವ್ಯವಸ್ಥೆಯನ್ನು ರದ್ದುಪಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ 57 ಸಾವಿರ ನೌಕರರನ್ನು ಕಾಯಂಗೊಳಿಸಿ ಭಾನುವಾರ ಅಧಿಸೂಚನೆ ಹೊರಡಿಸಿದೆ.

ಚಾರಿತ್ರಿಕ ನಿರ್ಧಾರದ ಕುರಿತು ಕ್ಯಾಬಿನೆಟ್ ಸಭೆಯ ನಂತರ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜನರನ್ನು ಉದ್ದೇಶಿಸಿ ಮಾತನಾಡುತ್ತಾ, ಇದೊಂದು ಐತಿಹಾಸಿಕ ನಿರ್ಧಾರವಾಗಿದೆ. ಹಲವಾರು ರಾಜ್ಯಗಳಲ್ಲಿ ಇನ್ನೂ ಕೂಡ ಗುತ್ತಿಗೆ ಆಧಾರದ ನೇಮಕಾತಿ ವ್ಯವಸ್ಥೆಯಿದೆ. ಒಡಿಶಾದಲ್ಲಿ ಗುತ್ತಿಗೆ ಆಧಾರಿತ ವ್ಯವಸ್ಥೆ ಕೊನೆಗೊಂಡಿದೆ. 2013 ರಲ್ಲಿ ಗುತ್ತಿಗೆ ಆಧಾರಿತ ನೇಮಕಾತಿ ವ್ಯವಸ್ಥೆ ಆರಂಭವಾಗಿತ್ತು. ಒಡಿಶಾದ ಆರ್ಥಿಕ ವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದೆ ಎಂದು ಮುಖ್ಯಮಂತ್ರಿ ಸಂತಸ ವ್ಯಕ್ತಪಡಿಸಿದರು.

ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 1300 ಕೋಟಿ ರೂಪಾಯಿ ವೆಚ್ಚವಾಗಲಿದೆ. ಅಧಿಸೂಚನೆಯ ಪ್ರಕಾರ, ಈ ನಿಯಮಗಳನ್ನು ಈಗ ಒಡಿಶಾ ಗ್ರೂಪ್ ಬಿ, ಸಿ ಮತ್ತು ಡಿ ಪೋಸ್ಟ್ಗಳು(ರದ್ದತಿ ಮತ್ತು ವಿಶೇಷ ನಿಬಂಧನೆಗಳು) ನಿಯಮಗಳು, 2022 ಎಂದು ಕರೆಯಲಾಗುವುದು ಮತ್ತು ಒಡಿಶಾ ಗೆಜೆಟ್ನಲ್ಲಿ ಅವುಗಳ ಪ್ರಕಟಣೆಯ ದಿನಾಂಕದಂದು ಜಾರಿಗೆ ಬರಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!