Monday, February 24, 2025
Monday, February 24, 2025

ಹಿಮಾಚಲ ಪ್ರದೇಶ: ಉರುಳಿದ ಬ್ರಹತ್ ಬಂಡೆಗಳು | 9 ಸಾವು

ಹಿಮಾಚಲ ಪ್ರದೇಶ: ಉರುಳಿದ ಬ್ರಹತ್ ಬಂಡೆಗಳು | 9 ಸಾವು

Date:

ಕಿನ್ನೌರ್/ ಹಿಮಾಚಲ ಪ್ರದೇಶ: ಪ್ರಕೃತಿ ಮುನಿದರೆ ಪರಿಸ್ಥಿತಿ ಹೇಗಿರುತ್ತದೆ ಎಂಬುದಕ್ಕೆ ಇಂದು ನಡೆದ ಘಟನೆಯೇ ಸಾಕ್ಷಿ!

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತದ ಕಾರಣ ಬೆಟ್ಟದ ತುದಿಯಿಂದ ಕೇವಲ 10 ಸೆಕೆಂಡುಗಳಲ್ಲಿ ನೂರಾರು ಬ್ರಹತ್ ಬಂಡೆಗಳು ಶರವೇಗದಲ್ಲಿ ಉರುಳುತ್ತಾ ಅಪ್ಪಳಿಸಿದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಬಟ್ಸೆರಿ ಸೇತುವೆ ಸಂಪೂರ್ಣ ಕುಸಿದಿದ್ದು ವಾಹನಗಳು ನಜ್ಜುಗುಜ್ಜಾಗಿವೆ.

ಕಿನ್ನೌರ್ ಜಿಲ್ಲಾಡಳಿತದೊಂದಿಗೆ ಮಾತನಾಡಿದ್ದೇನೆ, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ಘಟನೆಯ ನಂತರ ಪ್ರತಿಕ್ರಿಯೆ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಸಲು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ತಂಡಗಳು ಕಿನ್ನೌರಿನ ಬಡ್ಸೆರಿ ಗ್ರಾಮಕ್ಕೆ ಧಾವಿಸಿವೆ. ಬಂಡೆ ಅಪ್ಪಳಿಸಿದ ಕಾರಣ ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಜನರಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಐಟಿಬಿಪಿ ಹೇಳಿದೆ.

ಹಿಮಾಚಲ ಪ್ರದೇಶದ ಕಿನ್ನೌರ್‌ ಘಟನೆಯಲ್ಲಿ ಸಾವನ್ನಪ್ಪಿದವರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!