ನವದೆಹಲಿ, ಜ.30: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 76ನೇ ಪುಣ್ಯತಿಥಿಯಂದು ಶ್ರದ್ಧಾಂಜಲಿ ಸಲ್ಲಿಸಿದರು. ಉಪಾಧ್ಯಕ್ಷ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಮತ್ತು ಹಿರಿಯ ದೆಹಲಿಯ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿಯವರ ಸಮಾಧಿಗೆ ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು. ಸರ್ವಧರ್ಮ ಪ್ರಾರ್ಥನಾ ಸಭೆಯೂ ನಡೆಯಿತು. ಈ ಸಂದರ್ಭ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು. ಈ ದಿನವನ್ನು ಹುತಾತ್ಮರ ದಿನವನ್ನಾಗಿಯೂ ಆಚರಿಸಲಾಗುತ್ತದೆ. 1948ರಲ್ಲಿ ಇದೇ ದಿನ ಮಹಾತ್ಮಾ ಗಾಂಧೀಜಿಯವರ ಹತ್ಯೆಯಾಗಿತ್ತು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 76ನೇ ಪುಣ್ಯತಿಥಿ: ದೇಶಾದ್ಯಂತ ಶ್ರದ್ಧಾಂಜಲಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 76ನೇ ಪುಣ್ಯತಿಥಿ: ದೇಶಾದ್ಯಂತ ಶ್ರದ್ಧಾಂಜಲಿ
Date: