Monday, September 7, 2026
Monday, September 7, 2026

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

Date:

ಮುಂಬೈ, ಜು. 2: ವಿರೋಧ ಪಕ್ಷದ ನಾಯಕರೊಬ್ಬರು ಆಡಳಿತ ಸರ್ಕಾರವನ್ನು ಬೆಂಬಲಿಸಿ ಅದರ ಭಾಗವಾಗಿದ್ದಾರೆ. ಹೌದು, ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಎನ್.ಸಿ.ಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಎನ್ಸಿಪಿಯ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯಲು ಬಯಸುವುದಾಗಿ ಘೋಷಿಸಿದ್ದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎನ್.ಸಿ.ಪಿ ನಾಯಕ ಶರದ್ ಪವಾರ್ ಆಡಳಿತಾರೂಢ ಎನ್.ಡಿ.ಎ ಮಿತ್ರಕೂಟ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂದು ವಿರೋಧ ಪಕ್ಷಗಳ ರಂಗವನ್ನು ಬಲಪಡಿಸುವಲ್ಲಿ ನೇತೃತ್ವ ವಹಿಸಿಕೊಂಡ ಬೆನ್ನಲ್ಲೇ, ಅವರ ಪಕ್ಷದ ಹಿರಿಯ ನಾಯಕ ಹಾಗೂ ಸಂಬಂಧಿ ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಎನ್.ಡಿ.ಎ. ಸರ್ಕಾರದ ಭಾಗವಾಗಿದ್ದು ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಉಂಟುಮಾಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!