Thursday, April 23, 2026
Thursday, April 23, 2026

ಅತಿವೇಗದ ಹುಚ್ಚು ಅಪಘಾತದಲ್ಲಿ ಅಂತ್ಯ

ಅತಿವೇಗದ ಹುಚ್ಚು ಅಪಘಾತದಲ್ಲಿ ಅಂತ್ಯ

Date:

ನವದೆಹಲಿ: ಅತಿವೇಗದ ಹುಚ್ಚು ಅಪಘಾತದಲ್ಲಿ ಅಂತ್ಯವಾದ ಘಟನೆ ಪೂರ್ವಾಂಚಲ ಎಕ್ಸ್ ಪ್ರೆಸ್ ಸುಲ್ತಾನಪುರದಲ್ಲಿ ನಡೆದಿದೆ. ಗಂಟೆಗೆ 300 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರಿನಲ್ಲಿ ವೈದ್ಯರು, ಎಂಜಿನಿಯರ್, ಇನ್ನಿಬ್ಬರು ಸಾವನ್ನಪ್ಪಿದ್ದಾರೆ.

ಘಟನೆ ನಡೆಯುವ ಕೆಲವೇ ನಿಮಿಷಗಳ ಹಿಂದೆ ಕಾರಿನಲ್ಲಿದ್ದವರು ಫೇಸ್ಬುಕ್ ಲೈವ್ ಕೂಡ ಮಾಡಿ “ಚಾರೋ ಮರೆಂಗೆ (ನಾವೆಲ್ಲರೂ ಸಾಯುತ್ತೇವೆ)” ಎಂದು ಹೇಳಿದರು.

ಬಿಹಾರದ ರೋಹ್ಟಾಸ್ ನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಆನಂದ್ ಪ್ರಕಾಶ್ ಸಹಪ್ರಯಾಣಿಕರ ಜೊತೆಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಗಂಟೆಗೆ 230 ಕಿ.ಮೀ. ವೇಗದಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.

ಕೆಲವೇ ಸೆಕೆಂಡುಗಳಲ್ಲಿ ನಾವು 300 ಕಿಮೀ ವೇಗದಲ್ಲಿ ಹೋಗುತ್ತೇವೆ, ಸಾಯಲೂಬಹುದು ಎಂದು ಹೇಳುವಷ್ಟರಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯೂ ನಜ್ಜುಗುಜ್ಜಾಗಿ ಮುದ್ದೆಯಾಗಿ ಬಿದ್ದಿದ್ದು ಒಳಗಿದ್ದವರ ರಕ್ತಸಿಕ್ತ ದೇಹಗಳು ಚೆಲ್ಲಾಪಿಲ್ಲಿಯಾಗಿದ್ದವು. ವೈದ್ಯ ಆನಂದ್ ಪ್ರಕಾಶ್, ಎಂಜಿನಿಯರ್ ದೀಪಕ್ ಕುಮಾರ್, ಅಖಿಲೇಶ್ ಸಿಂಗ್ ಮತ್ತು ಉದ್ಯಮಿ ಮುಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸುಲ್ತಾನ್ಪುರ ಎಸ್ಪಿ ಸೋಮನ್ ಬರ್ಮಾ ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ತನಿಖೆ ಮಾಡಲಾಗುತ್ತಿದೆ ಎಂದಿದ್ದಾರೆ.

ವಿಶೇಷ ಸೂಚನೆ: ಅತಿವೇಗದ ಚಾಲನೆ ಜೀವಕ್ಕೆ ಅಪಾಯ. ವಾಹನ ಚಲಾಯಿಸುವಾಗ ನಿಮ್ಮ ಹಾಗೂ ಇತರರ ಜೀವದ ಬಗ್ಗೆ ಕಾಳಜಿ ಇರಲಿ. ರಸ್ತೆ ಸುರಕ್ಷತಾ/ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಿ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!