Saturday, September 21, 2024
Saturday, September 21, 2024

ಪಂಚರಾಜ್ಯ ಚುನಾವಣಾ ಫಲಿತಾಂಶ ಬಿಜೆಪಿಗೆ ಶಕ್ತಿ ತುಂಬಿದೆ: ಪ್ರಧಾನಿ ನರೇಂದ್ರ ಮೋದಿ

ಪಂಚರಾಜ್ಯ ಚುನಾವಣಾ ಫಲಿತಾಂಶ ಬಿಜೆಪಿಗೆ ಶಕ್ತಿ ತುಂಬಿದೆ: ಪ್ರಧಾನಿ ನರೇಂದ್ರ ಮೋದಿ

Date:

ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿಯ ಬಡವರ ಪರ ಮತ್ತು ಸಕ್ರಿಯ ಆಡಳಿತಕ್ಕೆ ಅನುಮೋದನೆಯ ಮುದ್ರೆ ಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ಸಂಜೆ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಉತ್ತರ ಪ್ರದೇಶ, ಗೋವಾ ಮತ್ತು ಮಣಿಪುರದಲ್ಲಿ ಸರ್ಕಾರವಿದ್ದರೂ ಬಿಜೆಪಿಯ ಮತ ಹಂಚಿಕೆ ಹೆಚ್ಚಾಗಿದೆ. ಗೋವಾದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು.

ಹತ್ತು ವರ್ಷ ಅಧಿಕಾರದಲ್ಲಿದ್ದರೂ ರಾಜ್ಯದಲ್ಲಿ ಬಿಜೆಪಿ ಸ್ಥಾನಗಳ ಸಂಖ್ಯೆ ಹೆಚ್ಚಿದೆ. ಉತ್ತರಾಖಂಡದಲ್ಲೂ ಬಿಜೆಪಿ ಇತಿಹಾಸ ಸೃಷ್ಟಿಸಿದೆ ಎಂದರು. ಉತ್ತರ ಪ್ರದೇಶ ದೇಶಕ್ಕೆ ಹಲವು ಪ್ರಧಾನಿಗಳನ್ನು ನೀಡಿದೆ. ಆದರೆ ಐದು ವರ್ಷಗಳ ಅವಧಿ ಪೂರೈಸಿದ ಮುಖ್ಯಮಂತ್ರಿಯೊಬ್ಬರು ಮರು ಆಯ್ಕೆಯಾಗಿರುವುದು ಇದೇ ಮೊದಲ ನಿದರ್ಶನ ಎಂದು ಪ್ರಧಾನಿ ಹೇಳಿದರು.

37 ವರ್ಷಗಳಿಂದ ಉತ್ತರ ಪ್ರದೇಶದಲ್ಲಿ ಯಾವುದೇ ಸರ್ಕಾರ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿಲ್ಲ, ಈ ಬಾರಿ ಇತಿಹಾಸ ನಿರ್ಮಾಣವಾಗಿದೆ ಎಂದು ಅವರು ಹೇಳಿದರು. ವರ್ಷಗಳಲ್ಲಿ ಸರ್ಕಾರದ ಆಡಳಿತ ವ್ಯವಸ್ಥೆ ಸುಧಾರಿಸಿದೆ, ಮಾತ್ರವಲ್ಲದೆ ಇಡೀ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ನಮ್ಮ ತಾಯಂದಿರು ಮತ್ತು ಸಹೋದರಿಯರು, ಯುವಕರು ಭಾರತೀಯ ಜನತಾ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಇದೊಂದು ದೊಡ್ಡ ಸಂದೇಶವಾಗಿದೆ ಎಂದು ಪ್ರಧಾನಿ ಹೇಳಿದರು. ಮೊದಲ ಬಾರಿ ಮತದಾನ ಮಾಡಿದವರು ಅತ್ಯುತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡು ಬಿಜೆಪಿಯ ಗೆಲುವಿಗೆ ಕಾರಣರಾಗಿದ್ದಾರೆ. ಇಂದು ಸಂಭ್ರಮದ ದಿನವಾಗಿದೆ ಎಂದು ಪ್ರಧಾನಿ ತಮ್ಮ ಮಾತಿನಲ್ಲಿ ಉಲ್ಲೇಖಿಸಿದರು.

ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷ ನಡ್ಡಾ, ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಧಾನಸಭಾ ಚುನಾವಣೆಯ ವಿಜಯಕ್ಕಾಗಿ ಅಭಿನಂದಿಸಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!