Tuesday, February 25, 2025
Tuesday, February 25, 2025

ಬೆಂಗಳೂರಿನಲ್ಲಿ ಬೋಯಿಂಗ್‌ನ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿನಲ್ಲಿ ಬೋಯಿಂಗ್‌ನ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Date:

ಬೆಂಗಳೂರು, ಜ.19: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರವನ್ನು ಉದ್ಘಾಟಿಸಿದರು ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬೆಂಗಳೂರಿನ ಬೋಯಿಂಗ್ ಸೌಲಭ್ಯವು ‘ಮೇಕ್ ಇನ್ ಇಂಡಿಯಾ-ಮೇಕ್ ಫಾರ್ ದಿ ವರ್ಲ್ಡ್’ ಬಲಪಡಿಸುತ್ತದೆ ಮತ್ತು ಭಾರತದ ಪ್ರತಿಭೆಯಲ್ಲಿ ವಿಶ್ವದ ನಂಬಿಕೆಯನ್ನು ಬಲಪಡಿಸುತ್ತದೆ ಎಂದರು. ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಮತ್ತು ಬೋಯಿಂಗ್ ಸೌಲಭ್ಯವನ್ನು ಇಂದು ಉದ್ಘಾಟಿಸುವುದರೊಂದಿಗೆ, ಕರ್ನಾಟಕವು ದೇಶದ ಹೊಸ ವಿಮಾನಯಾನ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದರು. ವಿಮಾನ ಇಂಧನಕ್ಕೆ ಸಂಬಂಧಿಸಿದ ತೆರಿಗೆಗಳನ್ನು ಕಡಿಮೆ ಮಾಡಲು ಕೇಂದ್ರವು ರಾಜ್ಯ ಸರ್ಕಾರಗಳನ್ನು ಪ್ರೋತ್ಸಾಹಿಸುತ್ತಿದೆ.

ಕೇಂದ್ರ ಸರ್ಕಾರದ ನೀತಿ ಉಪಕ್ರಮಗಳಿಂದಾಗಿ ಭಾರತವು ಉತ್ತಮ ಸಂಪರ್ಕ ಹೊಂದಿದ ಮಾರುಕಟ್ಟೆಗಳಲ್ಲಿ ಒಂದಾಗುತ್ತಿದೆ. 2014 ರಲ್ಲಿ ಕೇವಲ 70 ಕಾರ್ಯಾಚರಣಾ ವಿಮಾನ ನಿಲ್ದಾಣಗಳೊಂದಿಗೆ, ದೇಶವು ಇಂದು 150 ಕಾರ್ಯಾಚರಣಾ ವಿಮಾನ ನಿಲ್ದಾಣಗಳನ್ನು ಹೊಂದಿದ್ದು, ಏರ್ ಕಾರ್ಗೋ ಸಾಮರ್ಥ್ಯದ ಹೆಚ್ಚಳದೊಂದಿಗೆ ದಕ್ಷತೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಭಾರತವು ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿದೆ. ಒಂದು ದಶಕದಲ್ಲಿ ದೇಶೀಯ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಪ್ರಧಾನಿ ಹೇಳಿದರು. ಉಡಾನ್‌ನಂತಹ ಯೋಜನೆಗಳು ಇದರಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ. ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಭಾರತೀಯ ಏರ್‌ಲೈನ್ಸ್ ಫ್ಲೀಟ್ ಗಾತ್ರವು ಹೆಚ್ಚುತ್ತಿದೆ. ವೇಗವಾಗಿ ಬೆಳೆಯುತ್ತಿರುವ ವಾಯುಯಾನ ಕ್ಷೇತ್ರವು ಭಾರತದ ಒಟ್ಟಾರೆ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಪ್ರಚೋದನೆಯನ್ನು ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಭಾರತದ ಪೈಲಟ್‌ಗಳಲ್ಲಿ ಶೇಕಡಾ 15 ರಷ್ಟು ಮಹಿಳೆಯರು, ಇದು ಜಾಗತಿಕ ಸರಾಸರಿಗಿಂತ ಮೂರು ಪಟ್ಟು ಹೆಚ್ಚು ಎಂದು ಪ್ರಧಾನಿ ಮಾಹಿತಿ ನೀಡಿದರು. ಏರೋಸ್ಪೇಸ್ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲು ಸರ್ಕಾರ ಬದ್ಧತೆಯನ್ನು ವ್ಯಕ್ತಪಡಿಸಿದರು. ದೂರದ ಪ್ರದೇಶಗಳಲ್ಲಿ ವಾಸಿಸುವ ಬಡವರಿಗೆ ಬೋಯಿಂಗ್ ಸುಕನ್ಯಾ ಕಾರ್ಯಕ್ರಮದ ಮೂಲಕ ಪೈಲಟ್ ಆಗುವ ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡುವ ಮೂಲಕ ವಿಮಾನಯಾನ ಕ್ಷೇತ್ರದಲ್ಲಿ ಮಹಿಳಾ ಭಾಗವಹಿಸುವಿಕೆಗೆ ಉತ್ತೇಜನ ನೀಡುವಲ್ಲಿ ಬೋಯಿಂಗ್ ಮಹತ್ವದ ಪಾತ್ರ ವಹಿಸಲಿದೆ. ಚಂದ್ರಯಾನದ ಐತಿಹಾಸಿಕ ಯಶಸ್ಸು ಭಾರತದ ಯುವಜನರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ತುಂಬಿದೆ.

ಪ್ರಧಾನಿ ಅವರನ್ನು ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬರಮಾಡಿಕೊಂಡರು.

ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದು ಈಗ 140 ಕೋಟಿ ಭಾರತೀಯರ ಸಂಕಲ್ಪವಾಗಿದೆ ಎಂದು ಹೇಳಿದ ಅವರು, ಕಳೆದ 9 ವರ್ಷಗಳಲ್ಲಿ ಸರಿಸುಮಾರು 25 ಕೋಟಿ ಭಾರತೀಯರನ್ನು ಬಡತನದಿಂದ ಮೇಲೆತ್ತಲಾಗಿದೆ. ಕೆಂಪು ಕೋಟೆಯಿಂದ ತಮ್ಮ ಘೋಷಣೆಯನ್ನು ಸ್ಮರಿಸಿದ ಪ್ರಧಾನಿ, ‘ಯಹೀ ಸಮಯ ಹೈ, ಸಹಿ ಸಮಯ ಹೈ’, ಬೋಯಿಂಗ್ ಮತ್ತು ಇತರ ಅಂತರರಾಷ್ಟ್ರೀಯ ಕಂಪನಿಗಳು ತಮ್ಮ ಬೆಳವಣಿಗೆಯನ್ನು ಭಾರತದ ತ್ವರಿತ ಏರಿಕೆಯೊಂದಿಗೆ ಜೋಡಿಸಲು ಇದು ಸರಿಯಾದ ಸಮಯ ಎಂದು ಹೇಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬೋಯಿಂಗ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!