Tuesday, September 24, 2024
Tuesday, September 24, 2024

ಉಗ್ರ ಇಮ್ತಿಯಾಜ್ ನನ್ನು ಹೊಡೆದುರುಳಿಸಿದ ಸೇನೆ

ಉಗ್ರ ಇಮ್ತಿಯಾಜ್ ನನ್ನು ಹೊಡೆದುರುಳಿಸಿದ ಸೇನೆ

Date:

ಶ್ರೀನಗರ: ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ನಡೆದ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನನ್ನು ನಿನ್ನೆ ರಾತ್ರಿ ಭದ್ರತಾ ಪಡೆಗಳು ಎನ್ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ.

ಜಮ್ಮು ಕಾಶ್ಮೀರದ ಬಂಡೀಪೊರಾ ಜಿಲ್ಲೆಯ ಗುಂದ್ ಜಹಾಂಗೀರ್ ಹಾಜಿನ್ ನಲ್ಲಿ ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಎನ್ಕೌಂಟರ್ ನಡೆಸಿದ ಕೆಲವೇ ಹೊತ್ತಿನಲ್ಲಿ ಎಲ್.ಇ.ಟಿ ಭಯೋತ್ಪಾದಕ ಸಂಘಟನೆಯ ಉಗ್ರ ಇಮ್ತಿಯಾಜ್ ಅಹ್ಮದ್ ದಾರ್ ಹಾಗೂ ಮತ್ತೋರ್ವ ಉಗ್ರ ಭದ್ರತಾ ಪಡೆಗಳ ಗುಂಡಿಗೆ ಶವವಾಗಿದ್ದಾರೆ.

ಕೆಲವು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಇಬ್ಬರು ಸರಕಾರಿ ಶಿಕ್ಷಕರಾದ ಸುಪಿಂದರ್ ಕೌರ್ ಹಾಗೂ ಚಾಂದ್ ಮತ್ತು ಮಹಮ್ಮದ್ ಶಫಿ ಲೋನ್ ಸೇರಿದಂತೆ ಮೂವರು ನಾಗರಿಕರನ್ನು ಹತ್ಯೆ ಮಾಡಿದ ಉಗ್ರರ ಗುಂಪಿನಲ್ಲಿ ಉಗ್ರ ಇಮ್ತಿಯಾಜ್ ಇದ್ದ ಎಂದು ಜಮ್ಮು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!