Monday, July 27, 2026
Monday, July 27, 2026

ಅನ್ ಲಾಕ್ ನಂತರ ಜನರ ವರ್ತನೆ ಆತಂಕ ಉಂಟುಮಾಡಿದೆ: ಪ್ರಧಾನಿ ಮೋದಿ

ಅನ್ ಲಾಕ್ ನಂತರ ಜನರ ವರ್ತನೆ ಆತಂಕ ಉಂಟುಮಾಡಿದೆ: ಪ್ರಧಾನಿ ಮೋದಿ

Date:

ಅನ್ಲಾಕ್ ನಂತರ ಜನರ ವರ್ತನೆಗಳ ಆತಂಕ ಉಂಟುಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಶುಕ್ರವಾರ ಕೋವಿಡ್ ಪರಿಸ್ಥಿತಿ ಕುರಿತು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ, ಕೇರಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಕರೋನಾ ಮುಗಿದಿಲ್ಲ.

ಕೋವಿಡ್ 3ನೇ ಅಲೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕಳೆದ ಕೆಲವು ದಿನಗಳಲ್ಲಿ 6 ರಾಜ್ಯಗಳಿಂದ (ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ, ಕೇರಳ) ಶೇ. 80 ರಷ್ಟು ಹೊಸ ಪಾಸಿಟಿವ್ ಪ್ರಕರಣಗಳು ಬಂದಿವೆ.

ಕೋವಿಡ್-19 ಎದುರಿಸಲು ಭಾರತ ಸರ್ಕಾರ 23,000 ಕೋಟಿ ರೂ. ತುರ್ತು ಪ್ರತಿಕ್ರಿಯೆ ಪ್ಯಾಕೇಜ್ ಘೋಷಿಸಿದೆ. ಆರೋಗ್ಯ ಮೂಲ ಸೌಕರ್ಯಗಳನ್ನು ಬಲಪಡಿಸಲು ರಾಜ್ಯಗಳು ಈ ಪ್ಯಾಕೇಜ್‌ ಸದುಪಯೋಗಪಡಿಸಿಕೊಳ್ಳಬೇಕು. ಮೂಲಸೌಕರ್ಯದ ಅಂತರವನ್ನು ತುಂಬಬೇಕಾಗಿದೆ. ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳತ್ತ ಗಮನ ಹರಿಸುವ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!