ಉಡುಪಿ, ಜೂ.19: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ, ಉಚ್ಛ ನ್ಯಾಯಾಲಯ ಹಾಗೂ ಇತರೇ ನ್ಯಾಯಾಲಯಗಳಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಕಂದಾಯ ಆಯುಕ್ತಾಲಯದಲ್ಲಿ ಕಾನೂನು ಕೋಶವನ್ನು ಸ್ಥಾಪಿಸಲು ಕಾನೂನು ಅಧಿಕಾರಿ (ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದರಂತೆ)- 04 ಹುದ್ದೆಗಳು ಹಾಗೂ ಸಹಾಯಕ ಕಾನೂನು ಅಧಿಕಾರಿ -04 ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಅಧಿಕಾರಿ ಹುದ್ದೆಗೆ ನಿವೃತ್ತ ಸರ್ಕಾರಿ ಕಾನೂನು ಅಧಿಕಾರಿ ಅಥವಾ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಎಲ್.ಎಲ್.ಬಿ
ವಿದ್ಯಾರ್ಹತೆ ಹೊಂದಿರುವ ನಿವೃತ್ತ ಕಂದಾಯ ಅಧಿಕಾರಿ/ ನಿವೃತ್ತ ಕೆ.ಎ.ಎಸ್ ಅಧಿಕಾರಿ ಅಥವಾ ಕನಿಷ್ಠ 10 ವರ್ಷಗಳ ಕಾಲ ಭೂ ಕಂದಾಯ ವ್ಯಾಜ್ಯಗಳ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ವಕೀಲರು ಮತ್ತು ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಇಂಟರ್ನ್ಶಿಪ್ನಲ್ಲಿರುವ ಕಾನೂನು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯಲ್ಲಿ ವೈಯಕ್ತಿತ ಮಾಹಿತಿ, ವಿದ್ಯಾರ್ಹತೆ ಹಾಗೂ ಸೇವಾ ಅನುಭವದ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ, ಜೂನ್ 20 ರ ಒಳಗಾಗಿ ಇ-ಮೇಲ್ [email protected] ಗೆ ಸಲ್ಲಿಸಬಹುದಾಗಿದೆ ಎಂದು ಕಂದಾಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.