Tuesday, March 24, 2026
Tuesday, March 24, 2026

337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆ ಭರ್ತಿ ಮಾಡಲು ಗ್ರೀನ್ ಸಿಗ್ನಲ್

337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆ ಭರ್ತಿ ಮಾಡಲು ಗ್ರೀನ್ ಸಿಗ್ನಲ್

Date:

ಬೆಳಗಾವಿ, ಡಿ.11: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೇ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1,500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ.

ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‍ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ.

ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು.

ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಉತ್ತರ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಸ್ಟ್ರೋ ಮೋಹನ್ ಅವರಿಗೆ ಅಂತರರಾಷ್ಟ್ರೀಯ ಗೌರವ

ಉಡುಪಿ, ಮಾ.23: ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕರು ಹಾಗೂ ಕ್ಯಾನನ್ ಇಓಎಸ್...

ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ

ಬೆಂಗಳೂರು, ಮಾ.23: ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ ರೂಪಿಸಲಾಗಿದೆ...

ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು, ಮಾ.23: ಅಡಿಕೆ ಮತ್ತು ಅಡಿಕೆ ಹಾಳೆಯು ಕ್ಯಾನ್ಸರ್ ಕಾರಕ ಎಂಬುದರ...

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮ ವಹಿಸಿದ ದೇವರ ದಾಸಿಮಯ್ಯ: ಎಂ.ಎ.ಗಫೂರ್

ಉಡುಪಿ, ಮಾ.23: ಹನ್ನೊಂದನೇ ಶತಮಾನದ ಆದ್ಯ ವಚನಕಾರ, ನೇಕಾರ ಸಮುದಾಯದ ಆರಾಧ್ಯ...
error: Content is protected !!