Friday, July 31, 2026
Friday, July 31, 2026

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜೂ.11: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು – 4 ಹುದ್ದೆಗಳ ನೇಮಕಾತಿಗಾಗಿ, ಕೃಷಿ / ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಎರಡು ವರ್ಷ ಹೆಚ್ಚಿನ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಷರತ್ತಿಗೊಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ. ಸದರಿ ನೇಮಕಾತಿಯು 2027 ರ ಮಾರ್ಚ್ 31 ರ ವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿಂದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ), ಸದರಿ ನೇಮಕಾತಿಗೆ ಅರ್ಹರಿರುವುದಿಲ್ಲ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿ ವೇಳೆಯಲ್ಲಿ ಅಥವಾ udupijda@gmail.com or atmaudupi@gmail.com ಇ-ಮೇಲ್ ಮುಖಾಂತರ
ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 22 ರ ಸಂಜೆ 5 ಗಂಟೆಯ ಒಳಗಾಗಿ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲೆ ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿರಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಹಾಗೂ ನೇರ ಸಂದರ್ಶನ ಪಕ್ರಿಯೆ ನಂತರ ಆಯ್ಕೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!