Tuesday, September 17, 2024
Tuesday, September 17, 2024

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಫೆ.21: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ ಒಬ್ಬರಂತೆ ನಗರ ಪುನರ್ವಸತಿ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574810, 2574811 ಅಥವಾ ತಾಲೂಕು ಪಂಚಾಯತ್‌ನ ಎಂ.ಆರ್.ಡಬ್ಲ್ಯೂ. (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಅನ್ನು ಸಂಪರ್ಕಿಸಬಹುದಾಗಿದೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!