Saturday, January 17, 2026
Saturday, January 17, 2026

ಮಣಿಪಾಲ: ‘ಕೃಷಿ ಉದ್ಯಮಿ’ ಉಚಿತ ತರಬೇತಿ

ಮಣಿಪಾಲ: ‘ಕೃಷಿ ಉದ್ಯಮಿ’ ಉಚಿತ ತರಬೇತಿ

Date:

ಮಣಿಪಾಲ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 08/11/2021 ರಿಂದ 20/11/2021, 13 ದಿನಗಳ ‘ಕೃಷಿ ಉದ್ಯಮಿ’ ಕುರಿತಾದ ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಾವಯವ ಕೃಷಿ, ನರ್ಸರಿ ಗಿಡಗಳ ನಿರ್ವಹಣೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಹಂದಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಕೃಷಿ, ನೀರಾವರಿ ಮುಂತಾದ ಕ್ಷೇತ್ರದ ಬಗ್ಗೆ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವಕ ಯುವತಿಯರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ದಿನಾಂಕ 05.11.2021 ರೊಳಗೆ ಈ ಕೆಳಗಿನ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ.

ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ದೂರವಾಣಿ ಮುಖಾಂತರವೂ ತರಬೇತಿಗೆ ನೊಂದಾಯಿಸಿಕೊಳ್ಳಬಹುದು. ಗ್ರಾಮೀಣ ಪ್ರದೇಶದ ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.

ಸಂಸ್ಥೆಯ ದೂರವಾಣಿ ಸಂಖ್ಯೆ: 0820-2570455, 9449862665
ವಿಳಾಸ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೆನರಾ ಬ್ಯಾಂಕ್ ಪ್ರ‍್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ-576104

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!