Sunday, February 23, 2025
Sunday, February 23, 2025

ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು

Date:

ಕುಂದಾಪುರ: ಫೈನಾನ್ಶಿಯರ್‌ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣವನ್ನು ಕ್ಷಿಪ್ರವಾಗಿ ಉಡುಪಿ ಜಿಲ್ಲೆಯ ಪೊಲೀಸರು ಬೇಧಿಸಿದ್ದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಹಾಲಾಡಿ- ಕೋಟೇಶ್ವರ ಮುಖ್ಯ ರಸ್ತೆಯ ಕಾಳಾವರ ಸಮೀಪದ ಕಾಂಪ್ಲೆಕ್ಸ್ ಒಂದರಲ್ಲಿ ಫೈನಾನ್ಸ್ ಸಂಸ್ಥೆ ನಡೆಸುತ್ತಿದ್ದ ಅಜೇಂದ್ರ ಶೆಟ್ಟಿ (33) ಅವರನ್ನು ಶುಕ್ರವಾರ ತಡರಾತ್ರಿ ಕೊಲೆಗೈಯಲಾಗಿತ್ತು. ಕೊಲೆ ನಡೆದ ಬಳಿಕ ಪರಾರಿಯಾಗಿದ್ದ ಪಾಲುದಾರ ಅನೂಪ್ ಶೆಟ್ಟಿ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದರು.

ಅಜೇಂದ್ರ ಶೆಟ್ಟಿ

ಅಜೇಂದ್ರ ಶೆಟ್ಟಿಯ ಫೈನಾನ್ಸ್ ಪಾಲುದಾರ ಕೊಲೆ ಆರೋಪಿ ಅನೂಪ್ ಶೆಟ್ಟಿ ಗೋವಾದ ಕೋಲ್ವಾ ಬೀಚ್ ಬಳಿ ಬಲೆಗೆ ಬಿದ್ದಿದ್ದಾನೆ. ಇಬ್ಬರ ನಡುವಿನ ಸ್ನೇಹ ಫೈನಾನ್ಸ್ ಸಂಸ್ಥೆ ಆರಂಭಿಸಲು ಕಾರಣವಾಗಿತ್ತು. ಆದರೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವೈಮನಸ್ಸು ಬೆಳೆಯಲು ಕಾರಣವಾಯಿತು ಎಂದು ಹೇಳಲಾಗುತ್ತಿದೆ. ಡ್ರೀಮ್ ಫೈನಾನ್ಸ್ ಪಾಲುದಾರ ಅಜೇಂದ್ರ ಶೆಟ್ಟಿ​ಯ ​ಕಾರು ಅಪಘಾತಕ್ಕೀಡಾದ ಬೆನ್ನಲ್ಲೇ ಹೊಸ ಕಾರೊಂದನ್ನು ಖರೀದಿಸಿದ್ದರು. ಅನೂಪ್‌ ಶೆಟ್ಟಿಗೆ ಈ ವಿಚಾರದಲ್ಲೇ ಅಸಮಾಧಾನವಿತ್ತು. 

ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಹಾಗೂ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಕೆ. ಶ್ರೀಕಾಂತ್ ಮಾರ್ಗದರ್ಶನದಲ್ಲಿ, ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ, ಕುಂದಾಪುರ ಉಪವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಆರೋಪಿಯನ್ನು ಗೋವಾ ರಾಜ್ಯದ ಕೋಲ್ವಾ ಬೀಚ್‌ ಬಳಿ ಬಂಧಿಸಲಾಗಿದ್ದು ತನಿಖಾಧಿಕಾರಿಯವರ ಎದುರು ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೊಲೆಯ ಬಗ್ಗೆ ಇನ್ನಷ್ಟು ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿಯಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!