Saturday, July 25, 2026
Saturday, July 25, 2026

ಭಾಸ್ಕರ್ ಶೆಟ್ಟಿ ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಭಾಸ್ಕರ್ ಶೆಟ್ಟಿ ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Date:

ರಾಜ್ಯವನ್ನು ಬೆಚ್ಚಿ ಬೀಳಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಅಪರಾಧಿಗಳಿಗೆ ಜೀವಿತಾವಧಿ ಜೈಲು ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮೂವರು ಅಪರಾಧಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಮತ್ತು ರಾಜೇಶ್ವರಿಯ ಗೆಳೆಯ ನಂದಳಿಕೆಯ ಜೋತಿಷ್ಯ ನಿರಂಜನ ಭಟ್ ಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದೆ. 

2016 ಜುಲೈ 28ರಂದು ಉಡುಪಿಯ ಇಂದ್ರಾಳಿಯಲ್ಲಿರುವ ಮನೆಯಿಂದ ಉದ್ಯಮಿ ಭಾಸ್ಕರ್ ಶೆಟ್ಟಿ ನಾಪತ್ತೆಯಾಗಿದ್ದರು. ಸುಮಾರು ಒಂದು ವಾರದ ನಂತರ ಪೊಲೀಸರು ಭಾಸ್ಕರ್ ಶೆಟ್ಟಿಯವರ ಪತ್ನಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿತ್ತು. 

ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಲಭಿಸಿದ್ದರೆ ಮಗ ನವನೀತ್ ಮತ್ತು ಆಕೆಯ ಗೆಳೆಯ ನಿರಂಜನ ಭಟ್ ಬೆಂಗಳೂರಿನ ಜೈಲಿನಲ್ಲಿದ್ದಾರೆ. ನಾಲ್ಕನೇ ಆರೋಪಿ ನಿರಂಜನ ಭಟ್ ತಂದೆ ಶ್ರೀನಿವಾಸ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಐದನೇ ಆರೋಪಿ ರಾಘವೇಂದ್ರ ಖುಲಾಸೆಗೊಂಡಿದ್ದಾರೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!