Sunday, February 23, 2025
Sunday, February 23, 2025

ಮಹಿಳೆಯರನ್ನು ಬ್ಲಾಕ್ಮೇಲ್ ಮಾಡುತ್ತಿದ್ದ ಫೇಕ್ ಐಡಿ ವಂಚಕ ಪೊಲೀಸ್ ಬಲೆಗೆ

ಮಹಿಳೆಯರನ್ನು ಬ್ಲಾಕ್ಮೇಲ್ ಮಾಡುತ್ತಿದ್ದ ಫೇಕ್ ಐಡಿ ವಂಚಕ ಪೊಲೀಸ್ ಬಲೆಗೆ

Date:

ಚೆನ್ನೈ: ಫೇಸ್ಬುಕ್ ನಲ್ಲಿ ಫೇಕ್ ಐಡಿಗಳ ಮೂಲಕ ಹಲವಾರು ಮಹಿಳೆಯರ ಸ್ನೇಹ ಸಂಪಾದಿಸಿ ಅವರ ಜೊತೆಗೆ ಸಲುಗೆಯಿಂದ ನಡೆಸಿದ ಸಂಭಾಷಣೆಗಳನ್ನು ಉಪಯೋಗಿಸಿ ಅವರನ್ನು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಫೇಕ್ ಐಡಿ ವಂಚಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತಮಿಳುನಾಡಿನ ತಿರುಮುಲೈವೊಯಲ್ ನಿವಾಸಿ ಲೋಕೇಶ್ ಬಂಧಿತ ವ್ಯಕ್ತಿ.

ಈತ ಇಂಜಿನಿಯರಿಂಗ್ ಕಾಲೇಜು ಶಿಕ್ಷಣ ಅರ್ಧದಲ್ಲಿ ಮೊಟಕುಗೊಳಿಸಿ ಮನೆಹಾಳು ಕೆಲಸಕ್ಕೆ ಕೈ ಹಾಕಲು ಆರಂಭಿಸಿದ. ಜನವರಿಯಿಂದ ಫೇಕ್ ಚಿತ್ರಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಫೇಕ್ ಅಕೌಂಟ್ ಗಳನ್ನು ಸೃಷ್ಟಿಸಿ ದೇಶದ ವಿವಿಧ ಭಾಗಗಳ ಮಹಿಳೆಯರು ಮಾತ್ರವಲ್ಲದೇ ವಿದೇಶಗಳಲ್ಲಿ ನೆಲೆಸಿದ ಮಹಿಳೆಯರನ್ನೂ ಈತ ಟಾರ್ಗೆಟ್ ಮಾಡಿ ಸ್ನೇಹ ಸಂಪಾದಿಸುತ್ತಿದ್ದ.

ಒಂಟಿ ಅಥವಾ ಅವಿವಾಹಿತ ಮಹಿಳೆಯರ ಜೊತೆಗೆ ಈತ ಸಲುಗೆಯ ಸಂಭಾಷಣೆಗಳನ್ನು ನಡೆಸಿ ಅವರೂ ಅದೇ ರೀತಿಯ ಪ್ರತಿಕ್ರಿಯೆ ನೀಡಲು ವಾತಾವರಣ ನಿರ್ಮಿಸಿ ಬಳಿಕ ಈ ಸಂಭಾಷಣೆಗಳ ಸ್ಕ್ರೀನ್ ಶಾಟ್ ತೆಗೆದು ನಿಮ್ಮ ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ತಲುಪುವಂತೆ ಮಾಡಿ ನಿಮ್ಮ ಜೀವನವನ್ನೇ ಹಾಳು ಮಾಡುತ್ತೇನೆ, ಇಲ್ಲದಿದ್ದರೆ ಇಷ್ಟು ಹಣ ಪಾವತಿಸಿ ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದ.

ಹಣ ಮಾತ್ರವಲ್ಲದೇ ಈತ ಚಿನ್ನಾಭರಣಗಳನ್ನು ನೀಡುವಂತೆ ಪೀಡಿಸುತ್ತಿದ್ದ ಎಂದು ಕಾಲೇಜು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸೈಬರ್ ಕ್ರೈಮ್ ಗೆ ಸಂಬಂಧಿಸಿದ ತಂತ್ರಜ್ಞಾನಗಳನ್ನು ಬಳಸಿ ಫೇಕ್ ಐಡಿ ವಂಚಕನನ್ನು ಬಂಧಿಸಿದ್ದಾರೆ.

ಈತ ಒಬ್ಬನೇ ಈ ದುಷ್ಕೃತ್ಯ ನಡೆಸುತ್ತಿದ್ದನೇ ಅಥವಾ ಇವನೊಂದಿಗೆ ಇತರರು ಸೇರಿ ಈ ಕೃತ್ಯ ಮಾಡಿರಬಹುದೇ ಎಂಬ ವಿಚಾರದ ಕುರಿತು ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!