Sunday, February 23, 2025
Sunday, February 23, 2025

ಪ್ರೇಯಸಿಯನ್ನು ಕೊಂದ ಯುವಕ ಸಾವು

ಪ್ರೇಯಸಿಯನ್ನು ಕೊಂದ ಯುವಕ ಸಾವು

Date:

ಉಡುಪಿ: ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ರಾಷ್ಟ್ರ‍ೀಯ ಹೆದ್ದಾರಿ ಆಶೀರ್ವಾದ ಥಿಯೇಟರ್ ಬಳಿಯ ಪೆಟ್ರ‍ೋಲ್ ಪಂಪ್ ಹತ್ತಿರ ಪ್ರೇಯಸಿಯನ್ನು ಕೊಂದು ಕುತ್ತಿಗೆ ಕೊಯ್ದುಕೊಂಡು ಆಸ್ಪತ್ರೆಗೆ ದಾಖಲಾದ ಅಲೆವೂರು ರಾಮ್ಪುರ ನಿವಾಸಿ ಸಂದೇಶ್ ಕುಲಾಲ್ (26) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಸಂತೆಕಟ್ಟೆಯ ರಾಷ್ಟ್ರ‍ೀಕೃತ ಬ್ಯಾಂಕ್ ಒಂದರಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಇದ್ದ ಸೌಮ್ಯಶ್ರೀ (26) ಹಾಗೂ ಉಡುಪಿಯ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಸಂದೇಶ್ ಕುಲಾಲ್ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಸೌಮ್ಯಶ್ರೀಯವರಿಗೆ ಕೆಲವು ದಿನಗಳ ಹಿಂದೆಯಷ್ಟೇ ಬೇರೊಬ್ಬರ ಜೊತೆಗೆ ನಿಶ್ಚಿತಾರ್ಥವಾಗಿತ್ತು. ಇದರಿಂದ ಕುಪಿತಗೊಂಡಿದ್ದ ಸಂದೇಶ್ ಕುಲಾಲ್ ಸೋಮವಾರ ಸಂಜೆ ಸೌಮ್ಯಶ್ರೀ ಕೆಲಸ ಮುಗಿಸಿ ಮನೆಗೆ ಹೋಗುವುದನ್ನು ಹೊಂಚು ಹಾಕಿ ಕುಳಿತಿದ್ದು ಆಕೆಯನ್ನು ಹಿಂಬಾಲಿಸಿಕೊಂಡು ಆಶೀರ್ವಾದ ಪೆಟ್ರೋಲ್ ಪಂಪ್ ಬಳಿ ಆಕೆಯ ವಾಹನವನ್ನು ಅಡ್ಡಗಟ್ಟಿ ಮನಬಂದಂತೆ ಸೌಮ್ಯಶ್ರೀಗೆ ಇರಿದು ಬಳಿಕ ತಾನೂ ಕತ್ತು ಕೊಯ್ದುಕೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ.

ಸೌಮ್ಯಶ್ರೀ ವಿಪರೀತ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದು, ಸೌಮ್ಯಶ್ರೀಯನ್ನು ಕೊಲೆಮಾಡಿದ ಸಂದೇಶ್ ಕುಲಾಲ್ ಮಂಗಳವಾರ ಮುಂಜಾನೆ ಸಾವನ್ನಪ್ಪಿದ್ದು ಪ್ರೇಮಕಥೆಯು ದುರಂತ ಅಂತ್ಯ ಕಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!