Sunday, September 13, 2026
Sunday, September 13, 2026

ನ್ಯಾಯಾಲಯದಲ್ಲೇ ಗುಂಡು ಹಾರಿಸಿ ಕುಖ್ಯಾತ ಪಾತಕಿಯ ಹತ್ಯೆ

ನ್ಯಾಯಾಲಯದಲ್ಲೇ ಗುಂಡು ಹಾರಿಸಿ ಕುಖ್ಯಾತ ಪಾತಕಿಯ ಹತ್ಯೆ

Date:

ನವದೆಹಲಿ: ಕುಖ್ಯಾತ ಪಾತಕಿಯ ಮೇಲೆ ವಿರೋಧಿ ಬಣದವರು ನ್ಯಾಯಾಲಯದಲ್ಲೇ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಉತ್ತರ ದೆಹಲಿಯ ರೋಹಿಣಿ ನ್ಯಾಯಾಲಯದ ಸಂಕೀರ್ಣದಲ್ಲಿ ಇಂದು ನಡೆದಿದೆ.

ಕುಖ್ಯಾತ ಪಾತಕಿ ಜಿತೇಂದರ್ ಮನ್ ಗೋಗಿಯ ವಿಚಾರಣೆ ನಡೆಸಲು ಈತನನ್ನು ದೆಹಲಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತಿದ್ದ ಸಂದರ್ಭದಲ್ಲಿ ‘ವಕೀಲರ ಧಿರಿಸಿನಲ್ಲಿ’ ಈತನ ಬರುವಿಕೆಗಾಗಿ ಹೊಂಚು ಹಾಕಿ ಕುಳಿತಿದ್ದ ವಿರೋಧಿ ಗ್ಯಾಂಗಿನ ರೌಡಿಗಳು ಈತನನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದರು. ತಕ್ಷಣ ಪ್ರತಿದಾಳಿ ನಡೆಸಿದ ದೆಹಲಿ ಪೋಲಿಸರು ಮೂವರು ಹಂತಕರನ್ನು ಸ್ಥಳದಲ್ಲೇ ಹೊಡೆದುರುಳಿಸಿದರು. ವಿರೋಧಿ ಗ್ಯಾಂಗಿನ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಪಾತಕಿ ಜಿತೇಂದರ್ ಮನ್ ಗೋಗಿ ಮೃತಪಟ್ಟಿದ್ದಾನೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೆಲವು ಮಂದಿ ಗಾಯಗೊಂಡಿದ್ದಾರೆ. ನ್ಯಾಯಾಲಯದಲ್ಲೇ ಇಂತಹ ಘಟನೆ ಸಂಭವಿಸಿದ್ದು ಭದ್ರತೆಯ ಲೋಪ ಎದ್ದು ಕಾಣುತ್ತಿದೆ ಎಂಬ ಕೂಗು ಕೇಳಿಬಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!